ಬ್ರೇಕಿಂಗ್ ನ್ಯೂಸ್
16-04-25 08:22 pm Mangalore Correspondent ಕರಾವಳಿ
ಮಂಗಳೂರು, ಎ.16 : ಎ.18ರಂದು ಅಡ್ಯಾರ್ ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಮಾದರಿಯ ಗೂಡ್ಸ್ ಮತ್ತು ಇತರ ಸಾರಿಗೆ ಬಸ್ ಗಳು ಮಂಗಳೂರು ಪಂಪ್ವೆಲ್ ನಿಂದ ಬಿಸಿ ರೋಡ್ ಕಡೆಗೆ ಹೋಗುವ ಮತ್ತು ಆ ಕಡೆಯಿಂದ ಬರುವ ವಾಹನಗಳು ಸಂಚಾರ ಮಾಡುವಂತಿಲ್ಲ. ತುರ್ತು ಅಗತ್ಯದ ಮತ್ತು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಅಲ್ಲದೆ, ಪಂಪುವೆಲ್ / ನಂತೂರು - ಪಡೀಲ್ – ಕಣ್ಣೂರು – ಅಡ್ಯಾರ್ - ಸಹ್ಯಾದ್ರಿ – ಅರ್ಕುಳ - ಪರಂಗಿಪೇಟೆ – ತುಂಬೆ - ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – ೭೩) ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.
ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿಕೆ
➢ ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ - ಬೋಳಿಯಾರ್ - ಮುಡಿಪು - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಬಿ.ಸಿ. ರೋಡ್ ಪೊಳಲಿ ದ್ವಾರ- ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ - ನೀರುಮಾರ್ಗ - ಬೈತುರ್ಲಿ - - ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.
➢ ವಳಚ್ಚಿಲ್ ಜಂಕ್ಷನ್ -ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು - ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.
➢ ಅಡ್ಯಾರ್ ಕಟ್ಟೆ- ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ - ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಪಂಪ್ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ - ಮುಡಿಪು - ಬೊಳಿಯಾರ್ - ಮೆಲ್ಕಾರ್ ಮೂಲಕ ಸಂಚರಿಸುವುದು.
➢ ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ - ಕುಲಶೇಖರ - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
➢ ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ - ಪಚ್ಚನಾಡಿ - ವಾಮಂಜೂರು - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ - ಕಾವೂರು - ಬಜಪೆ - ಕೈಕಂಬ - ಮೂಡಬಿದ್ರೆ ಮೂಲಕ ಸಂಚರಿಸುವುದು.
➢ ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
➢ ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of the large-scale protest scheduled at Kannur on April 18 against the Central Government’s Waqf Amendment Bill, the joint director of the district industrial centre has issued a traffic diversion order to manage the anticipated congestion along the national highway.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm