ಬ್ರೇಕಿಂಗ್ ನ್ಯೂಸ್
21-04-25 07:08 pm Mangalore Correspondent ಕರಾವಳಿ
ಪುತ್ತೂರು, ಎ.21 : ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಪುತ್ತೂರು ಘಟಕದ ವತಿಯಿಂದ ಅಮರ್ ಜವಾನ್ ಜ್ಯೋತಿ ಬಳಿ ನೂರಾರು ಮಂದಿ ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜಾತಿ ಗಣತಿ ವರದಿಯ ಬಗ್ಗೆ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಜನಿವಾರ ತೆಗೆಸುವ ಕೃತ್ಯ ನಡೆದಿದೆ. ಇದು ಕಾಕತಾಳೀಯ ಅನಿಸುತ್ತಿಲ್ಲ. ಸಣ್ಣ ಸಮಾಜವನ್ನು ಬೆದರಿಸಬಹುದು ಎನ್ನುವ ಲೆಕ್ಕಾಚಾರದಲ್ಲಿ ಸರ್ಕಾರದ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನೆಲ್ಲ ಎದುರಿಸಲು ಬ್ರಾಹ್ಮಣ ಸಮಾಜ ಮತ್ತೆ ಪರಶುರಾಮನಂತೆ ಕೊಡಲಿ ಕೈಗೆತ್ತಿಕೊಳ್ಳಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಗೃಹ ಸಚಿವರು ಘಟನೆ ಬಗ್ಗೆ ತಾತ್ಸಾರದ ಹೇಳಿಕೆ ನೀಡುತ್ತಿದ್ದಾರೆ. ಕ್ಷುಲ್ಲಕ ಅನ್ನುವ ರೀತಿ ಬಿಂಬಿಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದ ಮೇಲಿನ ದೌರ್ಜನ್ಯ ಸಹಿಸಲು ಅಸಾಧ್ಯ. ನಾವು ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಇಡೀ ರಾಜ್ಯದಲ್ಲಿ ಬ್ರಾಹ್ಮಣ ಸಮಾಜವನ್ನು ಜಾಗೃತಿ ಮೂಡಿಸಬೇಕು. ಇದಕ್ಕಾಗಿ ಸಮ್ಮೇಳನ ಮಾಡುತ್ತೇವೆ, ಸಂಖ್ಯೆಯಲ್ಲಿ ಸಣ್ಣ ಸಮಾಜವಾದರೂ ನಮ್ಮವರು ಧಾರ್ಮಿಕ ನಿಷ್ಠೆಯಲ್ಲಿ ಪ್ರಬಲರಿದ್ದಾರೆ ಎಂದು ಅರುಣ್ ಪುತ್ತಿಲ ಹೇಳಿದರು.
ಪ್ರತಿಭಟನೆ ಉದ್ಧೇಶಿಸಿ ಮಾತನಾಡಿದ ಬ್ರಾಹ್ಮಣ ಸಭಾ ಮುಖಂಡ ಮಹೇಶ್ ಕಜೆ, ಈ ಪ್ರಕರಣ ಮುಗಿದು ಹೋಗಿದೆ ಎಂದು ಸರಕಾರ ಹೇಳುತ್ತಿದೆ. ಆದರೆ ಇದು ಬ್ರಾಹ್ಮಣರ ಮೇಲಿನ ದೌರ್ಜನ್ಯದ ಆರಂಭ. ಮುಗಿದು ಹೋಗಿಲ್ಲ. ಎಲ್ಲೆಲ್ಲಿ ಬ್ರಾಹ್ಮಣ, ಗೋವುಗಳ ಮೇಲೆ ದೌರ್ಜನ್ಯ ನಡೆಯುತ್ತೋ ಅಲ್ಲಿ ಸರ್ವನಾಶ ಆಗಲಿದೆ. ನಮಗೆ ಪರಶುರಾಮನೇ ಆದರ್ಶ, ಅಗತ್ಯ ಬಿದ್ದರೆ ಕತ್ತಿ ಹಿಡಿಯಲು ತಯಾರಿದ್ದೇವೆ ಎಂದರು.
In a dramatic turn of events, members of the Brahmin community in Puttur have voiced their grievances in a series of protests, culminating in a warning of potential action reminiscent of the legendary figure Parashurama. Arun Puttila, a prominent leader within the community, made a passionate address during the protests, invoking the spirit of Parashurama, known for his fierce defense of Brahmin rights and his warrior ethos.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm