ಬ್ರೇಕಿಂಗ್ ನ್ಯೂಸ್
19-12-20 03:58 pm Mangalore Correspondent ಕರಾವಳಿ
ಮುಲ್ಕಿ, ಡಿ.19: ಇಲ್ಲಿನ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ಶಾಂಭವಿ ನದಿಯಲ್ಲಿ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಅದೇ ಬಲೆಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮುಲ್ಕಿ ಬಳಿಯ ಕಕ್ವ ನಿವಾಸಿ ವಿಜಯ್ ಫುರ್ಟಾಡೋ(47) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಅವರು ಕೊಕ್ರಾಣಿಯ ಶಾಂಭವಿ ನದಿ ತೀರದಲ್ಲಿ ಮೀನು ಹಿಡಿಯಲು ಬಲೆ ಹಾಕಿದ್ದರು. ರಾತ್ರಿ 10ರ ಸುಮಾರಿಗೆ ಪರಿಶೀಲಿಸಲು ತೆರಳಿದಾಗ, ಬಲೆಯೊಳಗೆ ಸಿಲುಕಿ ಮೃತಪಟ್ಟಿದ್ದಾರೆ.
ನದಿ ತೀರಕ್ಕೆ ತೆರಳಿದ ವಿಜಯ್ ಮನೆ ಕಡೆ ಬಾರದ್ದರಿಂದ ತಾಯಿ ಆತಂಕಗೊಂಡು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಕಾರ್ನಾಡು ಆಪತ್ಪಾಂಧವ ಆಸೀಫ್ ಅವರ ನೆರವಿನಿಂದ ರಾತ್ರೋರಾತ್ರಿ ಶವವನ್ನು ಮೇಲೆತ್ತಿದ್ದಾರೆ.
ಮೃತ ವಿಜಯ್ ಅವರು ದುಬೈನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಊರಿಗೆ ಬಂದು ಮೀನುಗಾರಿಕೆ ಉದ್ಯಮ ನಡೆಸುತ್ತಿದ್ದರು.
ಮುಲ್ಕಿಯ ವಿಜಯಾ ಕಾಲೇಜು ಹಳೆ ವಿದ್ಯಾರ್ಥಿಯಾಗಿದ್ದ ಅವರು ಕ್ರಿಕೆಟ್, ವಾಲಿಬಾಲ್ ನಲ್ಲಿ ಪ್ರತಿಭಾವಂತರಾಗಿದ್ದರು. ವಿಜಯ್ ಅವರು ತಾಯಿ, ಪತ್ನಿ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm