ಬ್ರೇಕಿಂಗ್ ನ್ಯೂಸ್
19-12-20 03:58 pm Mangalore Correspondent ಕರಾವಳಿ
ಮುಲ್ಕಿ, ಡಿ.19: ಇಲ್ಲಿನ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ಶಾಂಭವಿ ನದಿಯಲ್ಲಿ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಅದೇ ಬಲೆಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮುಲ್ಕಿ ಬಳಿಯ ಕಕ್ವ ನಿವಾಸಿ ವಿಜಯ್ ಫುರ್ಟಾಡೋ(47) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಅವರು ಕೊಕ್ರಾಣಿಯ ಶಾಂಭವಿ ನದಿ ತೀರದಲ್ಲಿ ಮೀನು ಹಿಡಿಯಲು ಬಲೆ ಹಾಕಿದ್ದರು. ರಾತ್ರಿ 10ರ ಸುಮಾರಿಗೆ ಪರಿಶೀಲಿಸಲು ತೆರಳಿದಾಗ, ಬಲೆಯೊಳಗೆ ಸಿಲುಕಿ ಮೃತಪಟ್ಟಿದ್ದಾರೆ.
ನದಿ ತೀರಕ್ಕೆ ತೆರಳಿದ ವಿಜಯ್ ಮನೆ ಕಡೆ ಬಾರದ್ದರಿಂದ ತಾಯಿ ಆತಂಕಗೊಂಡು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಕಾರ್ನಾಡು ಆಪತ್ಪಾಂಧವ ಆಸೀಫ್ ಅವರ ನೆರವಿನಿಂದ ರಾತ್ರೋರಾತ್ರಿ ಶವವನ್ನು ಮೇಲೆತ್ತಿದ್ದಾರೆ.
ಮೃತ ವಿಜಯ್ ಅವರು ದುಬೈನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಊರಿಗೆ ಬಂದು ಮೀನುಗಾರಿಕೆ ಉದ್ಯಮ ನಡೆಸುತ್ತಿದ್ದರು.
ಮುಲ್ಕಿಯ ವಿಜಯಾ ಕಾಲೇಜು ಹಳೆ ವಿದ್ಯಾರ್ಥಿಯಾಗಿದ್ದ ಅವರು ಕ್ರಿಕೆಟ್, ವಾಲಿಬಾಲ್ ನಲ್ಲಿ ಪ್ರತಿಭಾವಂತರಾಗಿದ್ದರು. ವಿಜಯ್ ಅವರು ತಾಯಿ, ಪತ್ನಿ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm