ಬ್ರೇಕಿಂಗ್ ನ್ಯೂಸ್
25-04-25 07:43 pm Mangalore Correspondent ಕರಾವಳಿ
ಮಂಗಳೂರು, ಎ.25 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಸರ್ಕಾರ ಪಾಕಿಸ್ತಾನ ಪ್ರಜೆಗಳು ಕೂಡಲೇ ದೇಶ ಬಿಟ್ಟು ಹೋಗಬೇಕು ಎಂದು ಎಚ್ಚರಿಕೆ ನೀಡಿತ್ತು. ಆದರೆ ಭಾರತ- ಪಾಕಿಸ್ತಾನ ಮಧ್ಯೆ ಮದುವೆ ಸಂಬಂಧ ಏರ್ಪಟ್ಟವರು ಈ ಆದೇಶದಿಂದ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಕರಾವಳಿಯಲ್ಲಿ ಅಧಿಕೃತ ಮಾಹಿತಿ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 14 ಮಂದಿ ಮತ್ತು ಮಂಗಳೂರಿನಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಯುವತಿಯರು ನೆಲೆಸಿದ್ದಾರೆ. ದೀರ್ಘಾವಧಿ ವೀಸಾದಲ್ಲಿ ಭಾರತಕ್ಕೆ ಬಂದಿರುವ ಇವರಿಗೆ ದೇಶದ ಪೌರತ್ವ ಸಿಕ್ಕಿಲ್ಲ. ಹೀಗಾಗಿ ಇವರನ್ನು ಸರ್ಕಾರ ಬಲವಂತದಿಂದ ಹೊರ ಹಾಕುತ್ತಾ ಎನ್ನುವ ಆತಂಕ ಸಂಬಂಧಿಕರಲ್ಲಿದೆ.
ಪಹಲ್ಗಾಮ್ನಲ್ಲಿ ಹಿಂದೂಗಳ ನರಮೇಧ ನಡೆದ ಬೆನ್ನಲ್ಲೇ ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ದೇಶ ತೊರೆಯಲು ಕೇಂದ್ರ ಸರ್ಕಾರದ ಗಡುವು ನೀಡಿತ್ತು. ಭಟ್ಕಳದಲ್ಲಿ 14 ಜನ ಪಾಕಿಸ್ತಾನ ಮೂಲದ ಮಹಿಳೆಯರಿದ್ದು ಸದ್ಯಕ್ಕೆ ತಾವು ಇದ್ದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಭಟ್ಕಳದ ನವಾಯತ್ ಹಾಗೂ ಪಾಕಿಸ್ತಾನದ ನವಾಯತ್ ಕುಟುಂಬದ ನಡುವೆ ಹಿಂದಿನಿಂದಲೂ ವೈವಾಹಿಕ ಸಂಬಂಧಗಳು ನಡೆಯುತ್ತಿದ್ದು ಕೊಡು ಕೊಳ್ಳುವಿಕೆ ನಡೆದುಬಂದಿದೆ. ಇವರಿಗೆ ಮಕ್ಕಳೂ ಜನಿಸಿದ್ದಾರೆ. ಪ್ರತಿ ಎರಡು ವರ್ಷಕ್ಕೆ ಒಮ್ಮೆ ಇವರ ವೀಸಾ ನವೀಕರಣವಾಗುತ್ತಿತ್ತು. ಇದೀಗ ಎಲ್ಲ ಪಾಕಿಸ್ತಾನಿಯರ ವೀಸಾ ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೀಗಾಗಿ ಇವರ ವೀಸಾ ರದ್ದಾಗುತ್ತಾ ಎನ್ನುವ ಕುತೂಹಲವಿದ್ದು ಪೊಲೀಸರು ಮೇಲಿನಿಂದ ಬರುವ ಆದೇಶಕ್ಕಾಗಿ ಕಾಯುತ್ತಿದ್ದಾರೆ.
ಮಹಿಳೆಯರು ಭಾರತದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಪರಿಗಣಿಸಿಲ್ಲ. ಭಾರತದಲ್ಲಿ ಹುಟ್ಟಿದ ಇವರ ಮಕ್ಕಳಿಗೂ ಪೌರತ್ವ ನೀಡಿಲ್ಲ. ಇವರು ಅಧಿಕೃತವಾಗಿ ಬಂದು ಉಳಿದುಕೊಂಡವರಾಗಿದ್ದರೆ, ಅನಧಿಕೃತವಾಗಿ ಬಂದು ಉಳಿದವರ ಪಟ್ಟಿ ದೊಡ್ಡದಿರಬಹುದು ಎಂದು ಹೇಳಲಾಗುತ್ತಿದೆ. ಪೊಲೀಸರು ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮಂಗಳೂರಿನಲ್ಲಿ ಸದ್ಯಕ್ಕೆ ಇಬ್ಬರು ಪಾಕ್ ಮೂಲದ ಯುವತಿಯರು ಇದ್ದಾರೆನ್ನುವ ಮಾಹಿತಿಯಿದ್ದು ಅವರ ಬಗ್ಗೆ ಪೊಲೀಸರು ನಿಗಾ ಇಟ್ಟಿದ್ದಾರೆ. ಇನ್ನಷ್ಟು ಮಂದಿ ಬಾಂಗ್ಲಾ ಮತ್ತು ಪಾಕ್ ಮೂಲದವರು ಕರಾವಳಿಯಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಅವರ ಬಗ್ಗೆ ಪೊಲೀಸರಲ್ಲು ಮಾಹಿತಿ ಇಲ್ಲ. ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಆಗಿಂದಾಗ್ಗೆ ಆರೋಪ ಕೇಳಿಬಂದರೂ, ಅವರು ಆಧಾರ್ ಇನ್ನಿತರ ಐಡಿ ಕಾರ್ಡ್ ಗಳನ್ನು ಮಾಡಿಕೊಂಡು ಸರ್ಕಾರದ ಕಣ್ಣಿನಿಂದ ಬಚಾವ್ ಆಗುತ್ತಿದ್ದಾರೆಂದು ಪೊಲೀಸ್ ಮೂಲಗಳೇ ಹೇಳುತ್ತಿವೆ.
14 Pakistani Origin Women Remain in Bhatkal Amid Deportation Orders, 2 in Mangalore Remain Unaccounted.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am