ಬ್ರೇಕಿಂಗ್ ನ್ಯೂಸ್
27-04-25 05:28 pm Mangalore Correspondent ಕರಾವಳಿ
ಮಂಗಳೂರು, ಎ.27 : ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಕ್ರಮ ತೀವ್ರ ವಿವಾದಕ್ಕೆ ಒಳಗಾಗಿತ್ತು. ಇದೀಗ ಅಂತಹದ್ದೇ ಆದೇಶ ರೈಲ್ವೇ ಇಲಾಖೆಯ ನೇಮಕಾತಿ ಪರೀಕ್ಷೆಗೂ ಕಾಣಿಸಿಕೊಂಡಿದ್ದು ಯಾವುದೇ ಧಾರ್ಮಿಕ ಸಂಕೇತಗಳನ್ನು ಅಭ್ಯರ್ಥಿಗಳು ಹೊಂದಿರಬಾರದು ಎಂದು ಪ್ರವೇಶ ಪತ್ರದಲ್ಲಿ ನಮೂದಿಸಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಇದೇ ಎಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು ಮಂಗಳೂರಿನಲ್ಲಿ ಬೋಂದೆಲ್ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಇದೆ. ಪರೀಕ್ಷೆ ಬರೆಯುವ ಮೊದಲು ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ, ಕಾಲುಂಗುರ, ತಿಲಕ, ಜನಿವಾರ, ಕೈಬಳೆ ಇನ್ನಿತರ ಎಲ್ಲವುಗಳನ್ನೂ ತೆಗೆದಿಟ್ಟು ಪರೀಕ್ಷಾ ಕೊಠಡಿ ಪ್ರವೇಶ ಮಾಡುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ಷೇಪಿಸಿದ್ದು ಈ ರೀತಿಯ ಆದೇಶ ಸರಿಯಲ್ಲ. ಇತ್ತೀಚಿಗೆ CET ಪರೀಕ್ಷೆ ಬರೆಯುವ ಸಂಧರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆಗೆ ದಕ್ಕೆಯಾಗಿದ್ದು, ಇಡೀ ದೇಶದ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣುಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಜನಿವಾರವನ್ನು ಕಿತ್ತು ಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗೆ ನೋವು ತಂದಂತಾಗುತ್ತದೆ. ಹಿಂದೂ ಬಹುಸಂಖ್ಯಾತ ನಮ್ಮ ದೇಶದಲ್ಲಿ ಈ ರೀತಿಯ ಹಿಂದೂ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. ಹಾಗಾಗಿ ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದು ವಿಹಿಂಪ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಹೇಳಿಕೆಯಲ್ಲಿ ತಿಳಿಸಿದ್ದಾರೆ.
A recent directive issued during the Railway Recruitment Board (RRB) examination has sparked controversy, after candidates were reportedly asked to remove religious symbols such as mangalsutra (sacred thread worn by married women), tilak (forehead mark), and janivara (sacred thread worn by Brahmin men) before entering the examination hall.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm