ಬ್ರೇಕಿಂಗ್ ನ್ಯೂಸ್
28-04-25 11:41 am Mangalore Correspondent ಕರಾವಳಿ
ಮಂಗಳೂರು, ಎ.28 : ರೈಲ್ವೇ ಇಲಾಖೆಯ ನೇಮಕಾತಿ ಪರೀಕ್ಷೆಗೂ ಹಿಂದು ಧಾರ್ಮಿಕ ಸಂಕೇತಗಳನ್ನು ತೆಗೆದಿಟ್ಟು ಬರಬೇಕೆಂದು ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಯ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ. ಸೋಮಣ್ಣ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಜನಿವಾರ, ಮಂಗಳಸೂತ್ರ, ತಿಲಕ ಇನ್ನಿತರ ಧಾರ್ಮಿಕ ಚಿಹ್ನೆಗಳನ್ನು ತೆಗೆಯದಂತೆ ಸಚಿವರ ಮೂಲಕ ಅಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ.
ಎಪ್ರಿಲ್ 29ರಂದು ದೇಶಾದ್ಯಂತ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರೈಲ್ವೇ ಪರೀಕ್ಷೆ ಹಮ್ಮಿಕೊಂಡಿದ್ದು ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳು ಯಾವುದೇ ಧಾರ್ಮಿಕ ಚಿಹ್ನೆಗಳನ್ನೂ ಧರಿಸುವಂತಿಲ್ಲ. ಅಲ್ಲದೆ, ಮಂಗಳಸೂತ್ರ, ಜನಿವಾರ, ಬಳೆ, ತಿಲಕ ಇನ್ನಿತರ ಎಲ್ಲ ಸಂಕೇತಗಳನ್ನು ತೆಗೆದಿಟ್ಟು ಪರೀಕ್ಷಾ ಕೊಠಡಿಗೆ ಬರಬೇಕೆಂದು ಸೂಚನೆ ನೀಡಲಾಗಿತ್ತು. ಈ ಬಗ್ಗೆ ಆಕ್ಷೇಪ ಕೇಳಿಬರುತ್ತಿದ್ದಂತೆ ವಿಶ್ವ ಹಿಂದು ಪರಿಷತ್ ಮುಖಂಡರು ಸಂಸದ ಚೌಟ ಮತ್ತು ಜಿಲ್ಲಾಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಿಸಬೇಕು. ಹಿಂದು ಧಾರ್ಮಿಕ ಸಂಕೇತ ತೆರವು ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದರು.
ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ರೈಲ್ವೇ ರಾಜ್ಯ ಸಚಿವ ವಿ. ಸೋಮಣ್ಣ ಅವರ ಜೊತೆಗೆ ಮಾತನಾಡಿದ್ದು ಈ ಕುರಿತು ರೈಲ್ವೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ರವಾನಿಸುವಂತೆ ಮಾಡಿದ್ದಾರೆ. ಈ ಬಗ್ಗೆ ಚೌಟ ತಮ್ಮ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಸಚಿವ ಸೋಮಣ್ಣ ಅವರು ಈ ವಿಚಾರದಲ್ಲಿ ತುರ್ತಾಗಿ ಸ್ಪಂದಿಸಿದ್ದು ಧಾರ್ಮಿಕ ಚಿಹ್ನೆ ಅಥವಾ ಮಂಗಳಸೂತ್ರ, ಜನಿವಾರದಂತಹ ಯಾವುದೇ ಧರ್ಮ ಸೂಚಕ ಸಂಕೇತಗಳನ್ನು ತೆರವುಗೊಳಿಸದಂತೆ ಅಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
Glad to inform that, as we brought it to his attention, our Union MoS Shri @VSOMANNA_BJP has intervened and instructed authorities not to indulge In any such practices that require those appearing for the examination for the post of Nursing Superintendent of Indian Railways to… pic.twitter.com/Ii3TXM01jf
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) April 28, 2025
A fresh controversy has erupted as candidates appearing for a railway examination have been instructed not to wear Mangalasutras and religious symbols. This comes close on the heels of a state-wide uproar after a student wearing a sacred thread (Janivara) was recently denied entry to a CET examination.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm