ಬ್ರೇಕಿಂಗ್ ನ್ಯೂಸ್
29-04-25 11:38 am Mangalore Correspondent ಕರಾವಳಿ
ಮಂಗಳೂರು, ಎ.29 : ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಮಹಿಳಾ ವೈದ್ಯೆಯನ್ನು ನಗರದ ಹೈಲ್ಯಾಂಡ್ ಆಸ್ಪತ್ರೆ ಸೇವೆಯಿಂದ ತೆರವು ಮಾಡಿದೆ. ಹಿಂದುಗಳ ಬಗ್ಗೆ ಮತ್ತು ದೇಶದ ವಿರುದ್ಧವಾಗಿ ಅರ್ಥ ಬರುವ ರೀತಿಯಲ್ಲಿ ವೈದ್ಯೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು.
ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ವಿವಾದಾತ್ಮಕ ಪೋಸ್ಟ್ ಹಾಕಿದ್ದರು. HELP STINKY HINDUS BEHIMD ME ( ನನ್ನ ಹಿಂದೆ ಬಿದ್ದಿರುವ ಕೊಳಕು ಹಿಂದೂಗಳಿಗೆ ಸಹಾಯ ಮಾಡಿ) ಮತ್ತು ಚರ್ಚೆಯ ನಡುವೆ ಟೀಕೆಗೆ ಉತ್ತರವಾಗಿ AM I INDIAN ? YES, DO I HATE INDIA ? YES, (ನಾನೂ ಭಾರತೀಯಳೇ, ನಾನು ಭಾರತವನ್ನು ದ್ವೇಷಿಸುತ್ತೇನೆ, ಹೌದು) ಎಂಬ ವಾಕ್ಯಗಳನ್ನು ಬರೆದು ಹಾಕಿದ್ದರು.
ಹೀಗೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಫೀಫ ಫಾತೀಮಾ ಎಂಬ ಮಹಿಳಾ ವೈದ್ಯೆಯ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ವಿವಾದಾತ್ಮಕ ಪೋಸ್ಟ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದರಿಂದ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಫೀಫಾ ಅವರನ್ನು ಆಸ್ಪತ್ರೆಯಿಂದ ವಜಾಗೊಳಿಸಿದೆ.
ಇದಲ್ಲದೆ, ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆ ಹೆಚ್.ಆರ್ ಅಧಿಕಾರಿ ಮಹಮ್ಮದ್ ಅಸ್ಲಾಂ ಅವರು ಅಫೀಫಾ ವಿರುದ್ದ ಪೊಲೀಸ್ ದೂರು ನೀಡಿದ್ದು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. BNS ಕಲಂ 196(1)(a), 353(2) ಅಡಿಯಲ್ಲಿ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A doctor working at Highland Hospital has been dismissed from service following allegations of sharing an anti-national post on social media. The action was taken after the post went viral and drew sharp criticism from various quarters.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm