ಬ್ರೇಕಿಂಗ್ ನ್ಯೂಸ್
29-04-25 11:00 pm Mangalore Correspondent ಕರಾವಳಿ
ಪುತ್ತೂರು, ಎ.29 : ಕಾಡಾನೆ ತಿವಿತಕ್ಕೆ ಒಳಗಾಗಿ 65 ವರ್ಷದ ವೃದ್ಧ ಮಹಿಳೆಯೊಬ್ಬರು ಬಲಿಯಾದ ಘಟನೆ ಪುತ್ತೂರು ತಾಲೂಕಿನ ಪೆರ್ಲಂಪಾಡಿಯ ಅರ್ತ್ಯಡ್ಕ ಎಂಬಲ್ಲಿ ನಡೆದಿದೆ.
ಕೆಎಫ್ ಡಿಸಿಯ ನಿವೃತ್ತ ಉದ್ಯೋಗಿ, ಸ್ಥಳೀಯ ನಿವಾಸಿ ರಬ್ಬರ್ ಟ್ಯಾಪಿಂಗ್ ಹೋಗುತ್ತಿದ್ದ ಸೆಲ್ಲಮ್ಮ (65) ಮೃತರು. ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅರಣ್ಯ ಇಲಾಖೆಗೆ ಸೇರಿದ ರಬ್ಬರ್ ತೋಟದಲ್ಲಿ ಘಟನೆ ನಡೆದಿದೆ. ಮಹಿಳೆ ಸಾವಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಅಧಿಕಾರಿಗಳನ್ನು ಸ್ಥಳೀಯ ಗ್ರಾಮಸ್ಥರು ತೀವ್ರ ತರಾಟೆಗೆ ಎತ್ತಿಕೊಂಡಿದ್ದಾರೆ. ಘಟನೆ ಬೆಳಗ್ಗೆ ನಡೆದಿದ್ದರೂ ಇಷ್ಟು ವಿಳಂಬವಾಗಿ ಬಂದಿದ್ದೀರಿ ಎಂದು ಮಧ್ಯಾಹ್ನ ಹೊತ್ತಿಗೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳನ್ನು ಜೋರು ಮಾಡಿದ್ದಾರೆ.





ಸ್ಥಳಕ್ಕೆ ಪುತ್ತೂರು ಶಾಸಕ ಅಶೋಕ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಪ್ರಮುಖರು ಭೇಟಿ ನೀಡಿದ್ದಾರೆ. ಕರ್ನಾಟಕ ಸರಕಾರದಿಂದ 15 ಲಕ್ಷ ಪರಿಹಾರದ ಜೊತೆಗೆ ಕೆಎಫ್ ಡಿಸಿ ಇಲಾಖೆಯಿಂದ ಪ್ರತ್ಯೇಕ ಪರಿಹಾರ ನೀಡಬೇಕು ಎಂದು ಸಂಜೀವ ಮಠಂದೂರು ಸ್ಥಳೀಯರೊಂದಿಗೆ ಸೇರಿ ಆಗ್ರಹ ಮಾಡಿದ್ದಾರೆ. ಕೆಲವು ವರ್ಷಗಳಿಂದ ಕಾಡಾನೆ ಉಪಟಳ ಜಾಸ್ತಿಯಾಗಿದೆ. ಈ ಭಾಗಕ್ಕೆ ಬರುವ ಕಾಡಾನೆಗಳನ್ನು ಇಲ್ಲಿಂದ ಹೊರಕ್ಕಟ್ಟ ಬೇಕು. ಇಲ್ಲಿಂದ ಹಿಡಿದು ನಾಗರಹೊಳೆಯತ್ತ ಬಿಡುವ ಕೆಲಸ ಆಗಬೇಕು ಎಂದು ಹೇಳಿದರು.
ಸ್ಥಳಕ್ಕೆ ಬಂದ ಶಾಸಕ ಅಶೋಕ್ ರೈ ಸ್ಥಳೀಯರ ಅಹವಾಲು ಕೇಳಿ, ಅರಣ್ಯ ಇಲಾಖೆಯಿಂದ 15 ಲಕ್ಷ ಪರಿಹಾರ ಕೊಡಿಸುವ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ. ಕೆಎಫ್ ಡಿಸಿ ಉದ್ಯೋಗಿ ಆಗಿದ್ದರೆ ಅಲ್ಲಿಂದ ಪರಿಹಾರ ಕೊಡಿಸಬಹುದು. ಅವರ ಕುಟುಂಬಸ್ಥರಿಗೆ ಉದ್ಯೋಗ ಕೊಡುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದರು. ಕಾಡಿನಲ್ಲಿ ಪ್ರಾಣಿಗಳನ್ನು ತಡೆಗಟ್ಟಲು ಕಷ್ಟ. ಸುರಕ್ಷತೆ ಬಗ್ಗೆ ನಾವೇ ಮಾಡಿಕೊಳ್ಳಬೇಕೇ ವಿನಾ ಅವನ್ನು ಬರದಂತೆ ಮಾಡುವುದಕ್ಕೆ ನಾವು ಹೇಳಿದರೆ ಕೇಳುತ್ತಿದ್ದರೆ ಆಗ್ತಿತ್ತು. ಅದು ನಮ್ಮ ಭಾಷೆ ಕೇಳುವುದಿಲ್ಲ. ಹಾಗಾಗಿ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು, ಅದನ್ನು ಯಾವ ರೀತಿ ಮಾಡಬೇಕೋ ಅದನ್ನು ಮಾಡಿಸಬೇಕು ಎಂದರು.
ಅರಣ್ಯಾಧಿಕಾರಿಗಳು ಕಾಡಾನೆಗಳನ್ನು ಹಿಂದಕ್ಕಟ್ಟಲು ಟಾಸ್ಕ್ ಫೋರ್ಸ್ ರಚಿಸುವುದಾಗಿ ಶಾಸಕರ ಮುಂದೆ ಭರವಸೆ ನೀಡಿದರು. ವರ್ಷದ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಕಾಡಾನೆಯ ತಿವಿತಕ್ಕೆ ಇಬ್ಬರು ಬಲಿಯಾಗಿದ್ದರು. ಈ ಬಾರಿ ಮಳೆಗಾಲದ ಮೊದಲೇ ಆನೆ ಉಪಟಳ ಹೆಚ್ಚಿದ್ದು, ಜನರು ಬೆಳಗ್ಗೆ, ಸಂಜೆ ಅರಣ್ಯದಂಚಿನಲ್ಲಿ ಅಡ್ಡಾಡಲು ಹೆದರುವ ಸ್ಥಿತಿಯಾಗಿದೆ.
A wild elephant attacked a 65-year-old woman killing her on the spot at a rubber plantation of Karnataka Forest Development Corporation (KFDC) at Harthyadka, Kolthige village in Puttur taluk in Dakshina Kannada on Tuesday, the police said.
04-05-26 07:16 pm
HK News Staffer
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
04-05-26 07:04 pm
HK News Staffer
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm