ಬ್ರೇಕಿಂಗ್ ನ್ಯೂಸ್
30-04-25 11:26 am Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಬಳಿಯಲ್ಲಿ ಯುವಕರ ಗುಂಪಿನಿಂದ ಥಳಿತಕ್ಕೊಳಗಾಗಿ ಹತ್ಯೆಗೀಡಾದ ಪ್ರಕರಣದಲ್ಲಿ ಸಂತ್ರಸ್ತ ಯುವಕನ ಗುರುತು ಪತ್ತೆಯಾಗಿದ್ದು ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ.
ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ ಪುಲಪ್ಪಳ್ಳಿ ನಿವಾಸಿಯೆಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು ಯುವಕನ ಗುರುತು ಪತ್ತೆಗಾಗಿ ಕುಟುಂಬ ಸದಸ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಕರಣ ಸಂಬಂಧಿಸಿ ಈಗಾಗಲೇ 15 ಜನರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್, ಆದರ್ಶ್ ಬಂಧಿತರು.
ಎಪ್ರಿಲ್ 27ರ ಭಾನುವಾರ ಸಂಜೆ ಕುಡುಪು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕ ದೇಶ ವಿರೋಧಿ ಘೋಷಣೆ ಕೂಗಿದ ವಿಷಯದಲ್ಲಿ ವಾಗ್ವಾದ ನಡೆಸಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದರು. ಗುಂಪು ಸೇರಿ ಥಳಿಸಿ ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಹಲ್ಲೆಗೀಡಾದ ಯುವಕ ಬಳಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಯುವಕನೆಂದು ಧರ್ಮ ದ್ವೇಷದಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆದರೆ ಸಾವಿಗೀಡಾದ ವ್ಯಕ್ತಿ ಯಾರೆಂದೇ ಗುರುತು ಸಿಕ್ಕಿರಲಿಲ್ಲ. ಸ್ಥಳೀಯ ಪೊಲೀಸರು ಹೇಳದಿದ್ದರೂ, ಗೃಹ ಸಚಿವ ಪರಮೇಶ್ವರ್ ಪಾಕಿಸ್ತಾನ ಜೊಂದಾಬಾದ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ನಡೆಸಿದ್ದರು ಎಂದಿದ್ದಾರೆ. ಹೀಗಾಗಿ ಮುಸ್ಲಿಂ ಎನ್ನುವುದಕ್ಕಿಂತಲೂ ದೇಶಕ್ಕೆ ವಿರುದ್ಧವಾಗಿ ಘೋಷಣೆ ಹಾಕಿದ್ದಕ್ಕಾಗಿ ಯುವಕರು ಹಲ್ಲೆ ನಡೆಸಿದ್ದರೆಂಬುದು ಕಂಡುಬರುತ್ತದೆ.
Kudupu Mob Lynching Murder Case, Five More Arrested for Assault Over Alleged Anti National Slogans.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm