ಬ್ರೇಕಿಂಗ್ ನ್ಯೂಸ್
30-04-25 11:26 am Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಬಳಿಯಲ್ಲಿ ಯುವಕರ ಗುಂಪಿನಿಂದ ಥಳಿತಕ್ಕೊಳಗಾಗಿ ಹತ್ಯೆಗೀಡಾದ ಪ್ರಕರಣದಲ್ಲಿ ಸಂತ್ರಸ್ತ ಯುವಕನ ಗುರುತು ಪತ್ತೆಯಾಗಿದ್ದು ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ.
ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ ಪುಲಪ್ಪಳ್ಳಿ ನಿವಾಸಿಯೆಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು ಯುವಕನ ಗುರುತು ಪತ್ತೆಗಾಗಿ ಕುಟುಂಬ ಸದಸ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಕರಣ ಸಂಬಂಧಿಸಿ ಈಗಾಗಲೇ 15 ಜನರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್, ಆದರ್ಶ್ ಬಂಧಿತರು.
ಎಪ್ರಿಲ್ 27ರ ಭಾನುವಾರ ಸಂಜೆ ಕುಡುಪು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕ ದೇಶ ವಿರೋಧಿ ಘೋಷಣೆ ಕೂಗಿದ ವಿಷಯದಲ್ಲಿ ವಾಗ್ವಾದ ನಡೆಸಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದರು. ಗುಂಪು ಸೇರಿ ಥಳಿಸಿ ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಹಲ್ಲೆಗೀಡಾದ ಯುವಕ ಬಳಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಯುವಕನೆಂದು ಧರ್ಮ ದ್ವೇಷದಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆದರೆ ಸಾವಿಗೀಡಾದ ವ್ಯಕ್ತಿ ಯಾರೆಂದೇ ಗುರುತು ಸಿಕ್ಕಿರಲಿಲ್ಲ. ಸ್ಥಳೀಯ ಪೊಲೀಸರು ಹೇಳದಿದ್ದರೂ, ಗೃಹ ಸಚಿವ ಪರಮೇಶ್ವರ್ ಪಾಕಿಸ್ತಾನ ಜೊಂದಾಬಾದ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ನಡೆಸಿದ್ದರು ಎಂದಿದ್ದಾರೆ. ಹೀಗಾಗಿ ಮುಸ್ಲಿಂ ಎನ್ನುವುದಕ್ಕಿಂತಲೂ ದೇಶಕ್ಕೆ ವಿರುದ್ಧವಾಗಿ ಘೋಷಣೆ ಹಾಕಿದ್ದಕ್ಕಾಗಿ ಯುವಕರು ಹಲ್ಲೆ ನಡೆಸಿದ್ದರೆಂಬುದು ಕಂಡುಬರುತ್ತದೆ.
Kudupu Mob Lynching Murder Case, Five More Arrested for Assault Over Alleged Anti National Slogans.
04-05-26 07:16 pm
HK News Staffer
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
04-05-26 07:04 pm
HK News Staffer
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm