ಬ್ರೇಕಿಂಗ್ ನ್ಯೂಸ್
30-04-25 04:06 pm Mangalore Correspondent ಕರಾವಳಿ
ಮಂಗಳೂರು, ಎ.30 : ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯತೆಯ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು ವರ್ಷಗಳಿಂದ ಜಿಲ್ಲೆಯ ಕೋಮು ಸೌರ್ಹಾದಕ್ಕೆ ಕೊಳ್ಳಿ ಇಡುವ ಯತ್ನ ಮಾಡುತ್ತಿವೆ. ಮೊನ್ನೆಯ ಕುಡುಪು ಘಟನೆ ಇದರ ಒಂದು ಭಾಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಯುವಕನ ಕೊಲೆ ಸಂಬಂಧ ಈಗಾಗಲೇ ಮಂಗಳೂರು ಪೊಲೀಸರು ಶೀಘ್ರ ಕ್ರಮ ತೆಗೆದುಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಕೆಲವು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು ಅವರ ಹೆಡೆಮುರಿ ಕಟ್ಟುವುದು ಖಂಡಿತ.
ಕೊಲೆ ಪ್ರಕರಣವನ್ನು ತ್ವರಿತವಾಗಿ ಬೇಧಿಸಿ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅದೇ ರೀತಿ ಜಿಲ್ಲೆಯ ಸೌರ್ಹಾದತೆ ಕಾಪಾಡುವುದು ಪೊಲೀಸರ ಜವಾಬ್ದಾರಿ. ಈ ಘಟನೆಯ ಬಳಿಕ ಕೆಲ ಸಮಾಜಘಾತಕ ಶಕ್ತಿಗಳು ದ್ವೇಷ ಹರಡುವ ಪ್ರಯತ್ನ ನಡೆಸುವ ಸಾಧ್ಯತೆಯಿದೆ. ಪೊಲೀಸರು ಅದಕ್ಕೆ ಅವಕಾಶ ಕೊಡಬಾರದು.
ಕೋಮು ಸಂಘರ್ಷ ಹುಟ್ಟು ಹಾಕುವ ಮೂಲಕ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆನ್ನುವುದು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಉದ್ದೇಶವಾಗಿದೆ. ದಕ್ಷಿಣ ಕನ್ನಡದ ಜನ ಈ ಹುನ್ನಾರಗಳನ್ನು ಅರಿಯಬೇಕು. ಪ್ರಜ್ಞಾವಂತರ ಜಿಲ್ಲೆ ಎಂದೇ ಹೆಸರಾದ ದಕ್ಷಿಣ ಕನ್ನಡಕ್ಕೆ ಕಳಂಕ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಕಾನೂನು ಕೈಗೆತ್ತಿಕೊಳ್ಳುವ, ಸಮಾಜದ ಸ್ವಾಸ್ಥ್ಯ ಕೆಡಿಸುವ, ಸಾಮರಸ್ಯಕ್ಕೆ ಕೊಳ್ಳಿ ಇಡುವ ಯಾವುದೇ ದುಷ್ಟ ಪ್ರಯತ್ನಕ್ಕೆ ನಮ್ಮ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ. ಈ ವಿಚಾರದಲ್ಲಿ ನಮ್ಮದು ಶೂನ್ಯ ಸಹಿಷ್ಣುತೆ ಎಂಬ ಮಾತನ್ನು ಸಮಾಜ ಘಾತಕರಿಗೆ ಎಚ್ಚರಿಕೆ ರೂಪದಲ್ಲಿ ಹೇಳಲು ಬಯಸುತ್ತೇನೆ.
ದಯೆಗಿಂತ ಮಿಗಿಲಾದ ಧರ್ಮವಿಲ್ಲ ಎಂಬ ಬಸವಣ್ಣನವರ ಆಶಯದಂತೆ ನಮ್ಮ ಸರ್ಕಾರ ಆಡಳಿತ ನಡೆಸುತ್ತಿದೆ. ಈ ಆಶಯಕ್ಕೆ ಧಕ್ಕೆ ಬರಬಾರದು. ಸಮಾಜದ ಶಾಂತಿ ಕದಡಬಾರದು. ಇದು ನನ್ನ ಮನವಿ ಎಂದು ಕುಡುಪು ಗುಂಪು ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
Dakshina Kannada district in-charge minister Dinesh Gundu Rao has strongly condemned the barbaric murder of a youth who was bludgeoned with a stone near Kudupu on the city outskirts.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm