ಬ್ರೇಕಿಂಗ್ ನ್ಯೂಸ್
20-12-20 04:09 pm Mangaluru Correspondent ಕರಾವಳಿ
ಉಳ್ಳಾಲ, ಡಿ.20: ಪಂಚಾಯತ್ ಚುನಾವಣೆಗೆ ಇನ್ನೆರಡೇ ದಿನ ಇರುವಾಗ, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಯು.ಟಿ.ಖಾದರ್ ಮತ್ತು ಕಾಂಗ್ರೆಸ್ ನಾಯಕರ ಫೋಟೊ ಬಳಸಿ, ಕರಪತ್ರಗಳನ್ನು ಅಭ್ಯರ್ಥಿಗಳ ಪರವಾಗಿ ಮನೆ ಮನೆಗೆ ಹಂಚುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಈ ಬಗ್ಗೆ ಬಿಜೆಪಿ ನಾಯಕರು ಮಂಗಳೂರು ಸಹಾಯಕ ಆಯುಕ್ತರಿಗೆ ದೂರು ನೀಡಿದ್ದಾರೆ.
ಬಾಳೆಪುಣಿ ಪಂಚಾಯತ್ ವ್ಯಾಪ್ತಿಯ ನಾಲ್ಕನೇ ವಾರ್ಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಶಾಸಕ ಯು.ಟಿ.ಖಾದರ್ ಸಾಧನೆಗಳ ಕುರಿತ ಕರಪತ್ರಗಳನ್ನು ಹಂಚುತ್ತಿದ್ದು ಈ ಬಗ್ಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಅವರು ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅವರಿಗೆ ದೂರು ನೀಡಿದ್ದಾರೆ.

ಬಾಳೆಪುಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ಈ ಬಾರಿ ಮತ್ತೆ ಕಾಂಗ್ರೆಸ್ ಬೆಂಬಲಿತ ನಾಲ್ಕನೇ ವಾರ್ಡ್ ನ ಅಭ್ಯರ್ಥಿಯಾಗಿ ಸ್ಫರ್ಧಿಸುತ್ತಿದ್ದು , ವಾರ್ಡ್ ನ ಮತ್ತೋರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಮೀಮ ಜೊತೆ ಮನೆ, ಮನೆ ಪ್ರಚಾರಕ್ಕೆ ತೆರಳುತ್ತಿದ್ದಾರೆ. ಈ ವೇಳೆ, ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರ ಭಾವಚಿತ್ರವುಳ್ಳ ಮತ್ತು ಅವರ ಸಾಧನೆ, ಅಭಿವೃದ್ಧಿಯ ಬಗ್ಗೆ ಉಲ್ಲೇಖದ ಕರಪತ್ರಗಳನ್ನು ಮತದಾರರಿಗೆ ಹಂಚಿರುವುದಾಗಿ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದು, ಕರಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಚುನಾವಣಾಧಿಕಾರಿ ಮಂಗಳೂರು ಸಹಾಯಕ ಆಯುಕ್ತರಾದ ಮದನ್ ಮೋಹನ್ ಅವರಿಗೆ ಸಾಮಾಜಿಕ ಜಾಲತಾಣ ವಾಟ್ಸಪ್ ಮುಖಾಂತರ ದೂರು ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಪಂಚಾಯತ್ ಚುನಾವಣೆಯಲ್ಲಿ ಸ್ಫರ್ಧಿಸುವ ಅಭ್ಯರ್ಥಿಗಳಿಗೆ ಪಕ್ಷದ ಅಧಿಕೃತ ಚಿಹ್ನೆಗಳನ್ನು ನೀಡಲಾಗುವುದಿಲ್ಲ. ಕರಪತ್ರಗಳಲ್ಲೂ ಯಾವುದೆ ಪಕ್ಷದ ಚಿಹ್ನೆ ಅಥವಾ ಪಕ್ಷದ ನಾಯಕರ ಸಾಧನೆ ಅಥವಾ ಭಾವಚಿತ್ರಗಳನ್ನು ಪ್ರಕಟಿಸುವಂತಿಲ್ಲ. ಹಾಗಿದ್ದರೂ ಖಾದರ್ ಅವರು ಪ್ರತಿನಿಧಿಸುವ ಮಂಗಳೂರು ಕ್ಷೇತ್ರದಲ್ಲಿ ಈ ರೀತಿಯ ಕರಪತ್ರಗಳು ಮತದಾರರ ಮನೆ ಮನೆ ಹರಿದಾಡುತ್ತಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
Balepuni panchayat 4th ward constants were found distributing flyers with U T Khader and other congress leaders pictures in Ullal. A case has been filed to Mangalore Corportaiton Assist commissioner.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm