ಬ್ರೇಕಿಂಗ್ ನ್ಯೂಸ್
05-05-25 11:22 am Mangalore Correspondent ಕರಾವಳಿ
ಮಂಗಳೂರು, ಮೇ 5 : ನಗರದ ಕೆ.ಎಸ್ ರಾವ್ ರಸ್ತೆಯ ಗಣೇಶ್ ಮಹಲ್ ಕಟ್ಟಡದಲ್ಲಿ ದಕ್ಷಿಣ ಭಾರತದ ಹೆಸರಾಂತ ಪಾಕಶಾಲ ವೆಜಿಟೇರಿಯನ್ ರೆಸ್ಟೋರೆಂಟ್ ಆರಂಭಗೊಂಡಿದ್ದು, ಭಾನುವಾರ ಅಧಿಕೃತ ಉದ್ಘಾಟನೆಗೊಂಡಿದೆ. ಕರ್ನಾಟಕ ಕರಾವಳಿಯಲ್ಲಿ ಪಾಕಶಾಲಾ ಸಂಸ್ಥೆಯ ನಾಲ್ಕನೇ ಶಾಖೆ ಇದಾಗಿದೆ. ಮಂಗಳೂರಿನ ಹೃದಯಭಾಗದಲ್ಲಿ ಪ್ರವಾಸಿಗಳು, ವಿದ್ಯಾರ್ಥಿಗಳು ಮತ್ತು ಕುಟುಂಬ ಸಮೇತ ವೆಜ್ ಡಿಶ್ ಗಳನ್ನು ಸವಿಯಲು ರೆಸ್ಟೋರೆಂಟ್ ಹೇಳಿ ಮಾಡಿಸಿದಂತಿದೆ. ವಿಶಾಲ ಹವಾನಿಯಂತ್ರಿತ ಡೈನಿಂಗ್ ಹಾಲ್ ಮತ್ತು ಪಾರ್ಟಿ ಹಾಲ್ ಇದ್ದು ಫ್ಯಾಮಿಲಿ ಪಾರ್ಟಿಗಳಿಗೆ, ಸಾಧಾರಣ ಮಟ್ಟದ ಪಾರ್ಟಿ ಆಯೋಜನೆಗೆ ಅವಕಾಶ ಇರುತ್ತದೆ.
1960ರಲ್ಲಿ ನಾಗೇಶ್ವರ ಅಡಿಗ ಮತ್ತು ಕೆಎನ್ ಸರಸ್ವತಿ ದಂಪತಿ 1960ರಲ್ಲಿ ಬ್ರಾಹ್ಮಣರ ಕಾಫಿ ಬಾರ್ ಹೆಸರಲ್ಲಿ ಬೆಂಗಳೂರಿನಲ್ಲಿ ಮೊದಲಿಗೆ ಹೊಟೇಲ್ ಉದ್ಯಮ ಆರಂಭಿಸಿದ್ದರು. ಸರಳ ಮತ್ತು ಶುಚಿ ರುಚಿಯಾದ ಆಹಾರ ಖಾದ್ಯಗಳ ಕಾರಣದಿಂದ ಬಹು ಜನರ ಮೆಚ್ಚುಗೆ ಗಳಿಸಿತ್ತು. ಇವರ ಮಗ ಕೆಎನ್ ವಾಸುದೇವ ಅಡಿಗ ಕುಂದಾಪುರದಲ್ಲಿ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದರೂ, ಹೊಟೇಲ್ ಉದ್ಯಮವನ್ನೇ ಮುಂದುವರಿಸಿ 1993ರಲ್ಲಿ ತನ್ನದೇ ಹೊಟೇಲ್ ಬ್ರಾಂಡ್ ಆರಂಭಿಸಿದ್ದರು.



ತ್ವರಿತ ಗತಿಯ ಸೇವೆ, ವೆಜಿಟೇರಿಯನ್ ಆಹಾರ ವೈವಿಧ್ಯದಲ್ಲಿ ಕ್ರಾಂತಿ ಎಬ್ಬಿಸಿದ ವಾಸುದೇವ ಅಡಿಗರು ಹೊಟೇಲ್ ಉದ್ಯಮವನ್ನು ದೊಡ್ಡ ಮಟ್ಟಿಗೆ ಕೊಂಡೊಯ್ದರು. ರಾಜ್ಯ ಮತ್ತು ದೇಶದ ಮಟ್ಟಕ್ಕೂ ಹೊಟೇಲ್ ಉದ್ಯಮ ಎತ್ತರಕ್ಕೇರಿಸಿದ್ದರು. ಅತ್ಯುತ್ತಮ ಉದ್ಯಮಿಯಾಗಿ ಹೊರ ಹೊಮ್ಮಿದ್ದರಿಂದ 2012ರಲ್ಲಿ ಫೋರ್ಬ್ಸ್ ಇಂಡಿಯಾದಲ್ಲಿ ಇವರು ಹೆಸರು ದಾಖಲಾಯಿತು. ಆಮೂಲಕ ವಾಸುದೇವ ಅಡಿಗರ ಹೆಸರು ದೇಶಾದ್ಯಂತ ಪ್ರಸಿದ್ಧಿಗೆ ಬಂತು.
ಏಳು ವರ್ಷಗಳಲ್ಲಿ 30ಕ್ಕೂ ಹೆಚ್ಚು ಪಾಕಶಾಲೆ
2018ರಲ್ಲಿ ಪಾಕಶಾಲೆ ಹೆಸರಲ್ಲಿ ತಮ್ಮದೇ ಆದ ಹೊಟೇಲ್ ಉದ್ಯಮ ಸ್ಥಾಪಿಸಿದ್ದು, ಕೇವಲ ಏಳು ವರ್ಷಗಳಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ 30ಕ್ಕೂ ಹೆಚ್ಚು ಶಾಖೆಗಳನ್ನು ತೆರೆಯಿತು. ಇವರ ಸಂಸ್ಥೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಸಿಬಂದಿಗಳಿದ್ದು, ಸೌತ್ ಇಂಡಿಯನ್, ನಾರ್ತ್ ಇಂಡಿಯನ್ ಸೇರಿದಂತೆ 325ಕ್ಕೂ ಹೆಚ್ಚು ವೆಜಿಟೇರಿಯನ್ ಡಿಶ್ ಸರ್ವ್ ಮಾಡುತ್ತಾರೆ. ಇದೀಗ ಮಂಗಳೂರಿನ ಸಿಟಿ ಸೆಂಟರ್ ನಲ್ಲಿಯೇ ಹೊಸತಾಗಿ ಪಾಕಶಾಲೆಯ ಹೊಟೇಲ್ ಅಸ್ತಿತ್ವಕ್ಕೆ ಬಂದಿದ್ದು, ಜನಾಕರ್ಷಣೆ ಪಡೆಯಲಿದೆ.
ಈಗಾಗಲೇ ಕರಾವಳಿಯಲ್ಲಿ ಉಡುಪಿ, ಕುಂಭಾಶಿ, ಮುರ್ಡೇಶ್ವರದಲ್ಲಿ ಇವರ ಔಟ್ಲೆಟ್ ಇದ್ದು, ನಾಲ್ಕನೇಯದಾಗಿ ಮಂಗಳೂರಿನಲ್ಲಿ ಹೊಟೇಲ್ ಶಾಖೆ ಆರಂಭಗೊಂಡಿದೆ. ಸದ್ಯದಲ್ಲೇ ಮೈಸೂರು, ಕನಕಪುರ, ಮಂಡ್ಯ, ದಾವಣಗೆರೆ, ಗ್ರೇಟರ್ ಕೈಲಾಶ್- ನವದೆಹಲಿ, ಚೆಂಡೂರಿನಲ್ಲಿ ಪಾಕಶಾಲಾ ಹೊಟೇಲ್ ಔಟ್ಲೆಟ್ ಆರಂಭಗೊಳ್ಳಲಿದೆ.
Paakashala, South India’s leading multi-cuisine vegetarian restaurant chain, proudly announces the opening of its Mangalore outlet at Ganesh Mahal, KS Rao Road. The grand inauguration will be held on May 4, 2025, followed by a public opening on May 5, 2025. This marks Paakashala’s 4th coastal branch, continuing its expansion along Karnataka’s thriving western coastline.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm