ಬ್ರೇಕಿಂಗ್ ನ್ಯೂಸ್
05-05-25 10:59 pm Mangalore Correspondent ಕರಾವಳಿ
ಮಂಗಳೂರು, ಮೇ 5 : ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಕರೆ ಕೊಟ್ಟಿದ್ದರ ಪರಿಣಾಮ ಅವರ ಅನುಯಾಯಿಗಳು ಮೇ 2ರಂದು ಬೆಳಗ್ಗೆ ಬಸ್ಸಿಗೆ ಕಲ್ಲೆಸೆದು ಹಾನಿ ಮಾಡಿದ್ದು, ಇದಕ್ಕೆ ಶರಣ್ ಪಂಪ್ವೆಲ್ ಅವರು ಬಂದ್ ಕರೆ ಕೊಟ್ಟಿದ್ದೇ ಕಾರಣವೆಂದು ಕದ್ರಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ.
ಎಜೆ ಆಸ್ಪತ್ರೆಯ ಮುಂಭಾಗದಲ್ಲಿ ರಾತ್ರಿ ವೇಳೆ ಬಂದ್ ಕರೆ ಕೊಟ್ಟಿದ್ದು, ಅದರಂತೆ ಸಾರ್ವಜನಿಕರು ಬಂದ್ ಗೆ ಸಹಕರಿಸದೇ ಇದ್ದುದರಿಂದ ಅವರ ಅನುಯಾಯಿಗಳು ಬಸ್ಸಿಗೆ ಕಲ್ಲೆಸೆದು ಹಾನಿ ಮಾಡಿದ್ದರು. ಪ್ರಕ್ಷುಬ್ದ ವಾತಾವರಣ ನಿರ್ಮಾಣ ಮಾಡಿ ಸಾರ್ವಜನಿಕ ಆಸ್ತಿ ನಷ್ಟ ಉಂಟು ಮಾಡಿದ್ದರು. ಇದರಿಂದ ಎರಡು ಕೋಮುಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ಕದ್ರಿ ಠಾಣೆಯಲ್ಲಿ ಕಲಂ 353(3), 196(1) ಬಿ, 49, 324(2-4-5) ಪ್ರಕಾರ ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
ಇದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಸಂದೇಶಗಳನ್ನು ಹರಿಯಬಿಡುತ್ತಿರುವವರ ವಿರುದ್ಧ ಕೇಸುಗಳನ್ನು ಮುಂದುವರಿಸಿದ್ದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ವಿಕಾಶ್ ಪಿ. ಎಂಬ ಫೇಸ್ಬುಕ್ ಖಾತೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಆದಿಲ್ ಕಾಂಗ್ರೆಸಿಗರ ಜೊತೆಗೆ ತನ್ನ ಮನೆಯಲ್ಲಿರುವ ಫೋಟೋವನ್ನು ತೋರಿಸಿ, ತನ್ನ ಮನೆಯಲ್ಲಿ ಕೊಲೆಗೆ ಸಂಚು ನಡೆಸುತ್ತಿರುವುದಾಗಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ್ದಾರೆಂದು ಕೇಸು ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ರಾಹುಲ್ ರವಿಶಂಕರ್ ಎನ್ನುವ ಹೆಸರಿನ ಟ್ವಿಟರ್ ಖಾತೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಆದಿಲ್ ಸರಕಾರದಿಂದ ನೀಡಲ್ಪಟ್ಟ 25 ಲಕ್ಷ ಪರಿಹಾರದ ಹಣದಲ್ಲಿ 3 ಲಕ್ಷವನ್ನು ಆರೋಪಿಗಳಿಗೆ ಕೊಟ್ಟು ಕೊಲ್ಲಿಸಿದ್ದಾನೆಂದು ಪೋಸ್ಟ್ ಮಾಡಿದ್ದು, ಉರ್ವಾ ಠಾಣೆಯಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ.
ಕೋಣಾಜೆ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮನೀಶ್ ಎಸ್. ಎಂಬಾತ ದಕ್ಷಿಣ ಕನ್ನಡ ಜಿಲ್ಲೆಯ ಬಂದ್ ದಿವಸ ಇಂದು ನಾವು ನಮ್ಮ ಶಕ್ತಿ ತೋರಿಸದೇ ಇರಬಾರದು, ಸುಹಾಸ್ ಶೆಟ್ಟಿ ಬಲಿದಾನ ವ್ಯರ್ಥವಾಗಲು ಬಿಡಬಾರದು ಎಂದು ವಾಟ್ಸಪ್ ನಲ್ಲಿ ಪೋಸ್ಟ್ ಹಾಕಿದ್ದು, ಈ ಬಗ್ಗೆ ಕೇಸು ದಾಖಲಾಗಿದೆ. ಪ್ರಕರಣವನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿದೆ. ಬಂದರು ಠಾಣೆಯಲ್ಲಿ ದಾಖಲಾದ ಇನ್ನೊಂದು ಪ್ರಕರಣದಲ್ಲಿ ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬು ಮೇಲೆ ಯೂಟ್ಯೂಬ್ ಲೈವ್ನಲ್ಲಿ ವ್ಯಕ್ತಿಯೊಬ್ಬ ಜೀವ ಬೆದರಿಕೆ ಕಮೆಂಟ್ ಪೋಸ್ಟ್ ಹಾಕಿದ ಬಗ್ಗೆಯೂ ಕೇಸು ದಾಖಲಾಗಿದೆ.
The Mangaluru East Police on Monday, May 5, booked cases of public mischief, damage to property, promoting enmity between groups and abetment to crime against Vishwa Hindu Parishad‘s south Karnataka joint secretary Sharan Pumpwell with regard to his call for Dakshina Kannada bandh on May 1, Thursday midnight.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm