ಬ್ರೇಕಿಂಗ್ ನ್ಯೂಸ್
07-05-25 10:30 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಮುಸ್ಲಿಮರ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದು ಕೇಸಿಗೆ ತಡೆ ಕೋರಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನ ಎಸ್.ಬಿ.ಇಬ್ರಾಹಿಂ ಸಲ್ಲಿಸಿರುವ ದೂರಿನಂತೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಬೇಡಿಕೆ ಇಟ್ಟರು. ಇದಕ್ಕೆ ಹೈಕೋರ್ಟ್ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಇದರ ವ್ಯಾಪ್ತಿ ಬರುವುದಿಲ್ಲ. ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಒಪ್ಪಿಗೆ ಸಿಕ್ಕಿದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ವಿಚಾರಣೆ ಮುಂದೂಡಿದರು.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಮೇ 3ರಂದು ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ "ತೆಕ್ಕಾರಿನ ಕಂತ್ರಿ ಬ್ಯಾರಿಗಳು ಟ್ಯೂಬ್ಲೈಟ್ ಒಡೆದಿದ್ದಾರೆ. ಜನರೇಟರ್ನ ಡೀಸೆಲ್ ಕದ್ದಿದ್ದಾರೆ ಎಂಬ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿದೆ. ಬ್ರಹ್ಮಕಲಶೋತ್ಸವ ಮುಗಿಯುವ ವೇಳೆಗೆ ಕದ್ದಿರುವವರು ಯಾರು ಎಂಬ ಮಾಹಿತಿ ಬರುತ್ತದೆ. ನಮ್ಮಲ್ಲಿ ಸೌಹಾರ್ದತೆ ಬೇಕು. ನಾವು ಮಸೀದಿಗೆ ಹೋಗಿ ಆಮಂತ್ರಣ ಕೊಟ್ಟಿದ್ದರಿಂದ ಬ್ಯಾರಿಗಳು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಮಂತ್ರಣ ನೀಡಬಾರದಿತ್ತು. ಕಾರ್ಯಕ್ರಮಕ್ಕೆ ಕರೆಯಬಾರದಿತ್ತು" ಎಂದು ಹೇಳಿದ್ದರು.
ಇಂತಹ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ ಎಂದು ಎಸ್.ಬಿ. ಇಬ್ರಾಹಿಂ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಹರೀಶ್ ಪೂಂಜಾ ವಿರುದ್ಧ ಬಿಎನ್ಎಸ್ ಸೆಕ್ಷನ್ 196, 353(2) ಅಡಿ ಪ್ರಕರಣ ದಾಖಲಿಸಿದ್ದಾರೆ.
MLA Harish Poonja Moves High Court Seeking Quashing of FIR Over Alleged Derogatory Remarks Against Muslims.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 12:47 pm
HK News Desk
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm