ಬ್ರೇಕಿಂಗ್ ನ್ಯೂಸ್
07-05-25 10:30 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಮುಸ್ಲಿಮರ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದು ಕೇಸಿಗೆ ತಡೆ ಕೋರಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನ ಎಸ್.ಬಿ.ಇಬ್ರಾಹಿಂ ಸಲ್ಲಿಸಿರುವ ದೂರಿನಂತೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಬೇಡಿಕೆ ಇಟ್ಟರು. ಇದಕ್ಕೆ ಹೈಕೋರ್ಟ್ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಇದರ ವ್ಯಾಪ್ತಿ ಬರುವುದಿಲ್ಲ. ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಒಪ್ಪಿಗೆ ಸಿಕ್ಕಿದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ವಿಚಾರಣೆ ಮುಂದೂಡಿದರು.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಮೇ 3ರಂದು ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ "ತೆಕ್ಕಾರಿನ ಕಂತ್ರಿ ಬ್ಯಾರಿಗಳು ಟ್ಯೂಬ್ಲೈಟ್ ಒಡೆದಿದ್ದಾರೆ. ಜನರೇಟರ್ನ ಡೀಸೆಲ್ ಕದ್ದಿದ್ದಾರೆ ಎಂಬ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿದೆ. ಬ್ರಹ್ಮಕಲಶೋತ್ಸವ ಮುಗಿಯುವ ವೇಳೆಗೆ ಕದ್ದಿರುವವರು ಯಾರು ಎಂಬ ಮಾಹಿತಿ ಬರುತ್ತದೆ. ನಮ್ಮಲ್ಲಿ ಸೌಹಾರ್ದತೆ ಬೇಕು. ನಾವು ಮಸೀದಿಗೆ ಹೋಗಿ ಆಮಂತ್ರಣ ಕೊಟ್ಟಿದ್ದರಿಂದ ಬ್ಯಾರಿಗಳು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಮಂತ್ರಣ ನೀಡಬಾರದಿತ್ತು. ಕಾರ್ಯಕ್ರಮಕ್ಕೆ ಕರೆಯಬಾರದಿತ್ತು" ಎಂದು ಹೇಳಿದ್ದರು.
ಇಂತಹ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ ಎಂದು ಎಸ್.ಬಿ. ಇಬ್ರಾಹಿಂ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಹರೀಶ್ ಪೂಂಜಾ ವಿರುದ್ಧ ಬಿಎನ್ಎಸ್ ಸೆಕ್ಷನ್ 196, 353(2) ಅಡಿ ಪ್ರಕರಣ ದಾಖಲಿಸಿದ್ದಾರೆ.
MLA Harish Poonja Moves High Court Seeking Quashing of FIR Over Alleged Derogatory Remarks Against Muslims.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm