ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm