ಬ್ರೇಕಿಂಗ್ ನ್ಯೂಸ್
20-12-20 11:11 pm Mangaluru Correspondent ಕರಾವಳಿ
ಉಳ್ಳಾಲ, ಡಿ.20: ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲೆಂದೇ ಉಳ್ಳಾಲದ ನೇತ್ರಾವತಿ ಸೇತುವೆಗೆ ಕಬ್ಬಿಣದ ಸರಳಿನ ಬೇಲಿ ಹಾಕಲಾಗಿತ್ತು. ಆದರೆ, ಸಾಯೋರನ್ನು ತಡೆಯಲಾಗದು ಎನ್ನುವಂತೆ ಬೇಲಿ ಇರುವ ಸೇತುವೆ ಬಿಟ್ಟು ಪಕ್ಕದ ನೇತ್ರಾವತಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆಗೈದ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ.
ಕೋಟೆಕಾರಿನ ಮಾಡೂರು ನಿವಾಸಿ ಶಾರದಾ ಗಟ್ಟಿ (68) ಆತ್ಮಹತ್ಯೆಗೈದ ದುರ್ದೈವಿ. ಶಾರದಾ ಗಟ್ಟಿ ಅವರು ಮೂಲತಃ ಉಚ್ಚಿಲದ ಸಂಕೊಳಿಗೆ ನಿವಾಸಿಯಾಗಿದ್ದು, ಈ ಹಿಂದೆ ಸಂಕೊಳಿಗೆಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಅವರ ಹೊಟೇಲ್ ಶಾರದಕ್ಕನ ಹೊಟೇಲ್ ಎಂದೇ ಪ್ರಸಿದ್ಧಿ ಪಡೆದಿತ್ತು. ಸದ್ಯ ಅವರು ಮಾಡೂರಿನಲ್ಲಿರುವ ಮಗಳ ಮನೆಯಲ್ಲಿ ನೆಲೆಸಿದ್ದರೆನ್ನಲಾಗಿದೆ.

ಕಳೆದ ಡಿ.15 ರಂದು ಉಚ್ಚಿಲ ಸಂಕೋಳಿಗೆಯ ತರವಾಡಿನ ಮನೆಗೆ ಸಂಕ್ರಾತಿ ಪೂಜೆಗೆ ತೆರಳಿದ್ದ ಶಾರದ ಅವರು ನಾಪತ್ತೆಯಾಗಿದ್ದರು. ಮನೆ ಮಂದಿ ಶಾರದ ಅವರು ಬೇರೆ ಮಕ್ಕಳ ಮನೆಗೆ ತೆರಳಿದ್ದಾರೆ ಎಂದು ಸುಮ್ಮನಿದ್ದರು. ಡಿ.20ರಂದು ಕೂಡ ಶಾರದ ಅವರು ಮನೆಗೆ ಹಿಂದಿರುಗದ ಹಿನ್ನಲೆಯಲ್ಲಿ ಉಳ್ಳಾಲ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಇದೇ ವೇಳೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಅನಾಥ ವೃದ್ಧೆಯ ಶವ ಇರುವುದಾಗಿ ತಿಳಿಸಿದ್ದು ಮನೆಯವರು ತೆರಳಿ ವಿಚಾರಿಸಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿ ತೀರದಲ್ಲಿ ಡಿ.16ರಂದು ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದ್ದು ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಇದೀಗ ಆ ಶವವು ಶಾರದ ಗಟ್ಟಿಯವರದ್ದು ಎಂದು ತಿಳಿದು ಬಂದಿದೆ. ಖಿನ್ನತೆಯಿಂದ ಶಾರದ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ರಸ್ತೆಯ ಸೇತುವೆಯಲ್ಲಿ ಬೇಲಿ ಹಾಕಲಾಗಿದೆ. ಶವ ರೈಲ್ವೇ ಸೇತುವೆ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ಸಾವಿನ ದಾರಿ ಅತ್ತ ತಿರುಗಿದೆಯೇ ಅನ್ನುವ ಅನುಮಾನ ಉಂಟಾಗಿದೆ.
Old aged woman jumps off Netravati Bridge and her body has been recovered at ullal. The deceased has been identified as Sharada Gatti (68).
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm