ಬ್ರೇಕಿಂಗ್ ನ್ಯೂಸ್
14-05-25 01:28 pm Udupi Correspondent ಕರಾವಳಿ
ಉಡುಪಿ, ಮೇ 14 : ಭಾರೀ ಗಾಳಿ ಮಳೆಗೆ ಮರದ ಕೊಂಬೆ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ಕಡಿದು ಬಿದ್ದು ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಕುಂದಾಪುರ ಮೂಲದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶೃಂಗೇರಿಯ ಕೊಪ್ಪ ಸಮೀಪದಲ್ಲಿ ಏರ್ಪಾಟಾಗಿದ್ದ ಸೂರಾಲು ಮೇಳದ ಯಕ್ಷಗಾನ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಕಲಾವಿದರು ಅರ್ಧದಲ್ಲಿ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಆಗುಂಬೆ ಬಳಿಯಿಂದ ರಂಜಿತ್ ತನ್ನ ಬೈಕಿನಲ್ಲಿ ಬರುತ್ತಿದ್ದಾಗ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಇದರಿಂದ ದ್ವಿಚಕ್ರ ವಾಹನ ಬಿಡುತ್ತಿದ್ದ ರಂಜಿತ್ ಗಂಭೀರ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಈ ವೇಳೆ ಹಿಂಬದಿ ಸವಾರ ಸ್ತ್ರೀ ಪಾತ್ರಧಾರಿ ವಿನೋದ್ ರಾಜ್ ಎನ್ನುವವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಘಟನೆ ನಡೆದ ಕೂಡಲೇ ಸ್ಥಳೀಯರು ಸೇರಿ ರಂಜಿತ್ ಅವರನ್ನು ತುರ್ತಾಗಿ ಮಣಿಪಾಲ ಅಸ್ಪತ್ರೆಗೆ ತರಲಾಯಿತಾದರೂ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಕಾಡಿನ ಮಧ್ಯದ ರಸ್ತೆಯಲ್ಲಿ ಬರುತ್ತಿದ್ದಾಗ ಯಕ್ಷಗಾನ ಕಲಾವಿದರ ಪಾಲಿಗೆ ವಿದ್ಯುತ್ ತಂತಿ ಯಮನ ರೂಪದಲ್ಲಿ ಬಂದೆರಗಿತ್ತು.
Agumbe, Tragic Death of Young Yakshagana Artist as Power Line Falls on Him During Heavy Rain. The decreased has been identified as Ranjith.
04-05-26 04:14 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm