ಬ್ರೇಕಿಂಗ್ ನ್ಯೂಸ್
14-05-25 06:33 pm Mangalore Correspondent ಕರಾವಳಿ
ಮಂಗಳೂರು, ಮೇ 14 : ಗ್ರಾಪಂ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿಗೊಂಡು ಮೃತಪಟ್ಟಿದ್ದ ತನ್ನ ಗಂಡನ ಪಿಂಚಣಿ ಮೊತ್ತವನ್ನು ಕೇಳಲು ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಒಡ್ಡಿದ್ದ ಬಂಟ್ವಾಳ ತಾಲೂಕಿನ ಇಬ್ಬರು ಕಂದಾಯ ಇಲಾಖೆ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದೂರುದಾರ ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ನಿವೃತ್ತಿ ಹೊಂದಿದ್ದರು. ಆನಂತರ, 2024ರ ಜೂನ್ ತಿಂಗಳಿನಲ್ಲಿ ಅವರು ದಿಢೀರ್ ಮೃತಪಟ್ಟಿದ್ದರು. ಗಂಡನ ಹೆಸರಿಗೆ ಬರುತ್ತಿದ್ದ ಪಿಂಚಣಿ ಮೊತ್ತವನ್ನು ತನ್ನ ಹೆಸರಿಗೆ ಮಾಡಿಸಲು ಮಹಿಳೆ ಬಂಟ್ವಾಳ ತಾಲೂಕು ಕಂದಾಯ ಇಲಾಖೆ ಮುಖ್ಯ ಲೆಕ್ಕಿಗ ಭಾಸ್ಕರ್ ಎಂಬವರ ಬಳಿಗೆ ತೆರಳಿದ್ದರು. ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರಲಿಲ್ಲ. ಇತ್ತೀಚೆಗೆ ಮಹಿಳೆಯ ಖಾತೆಗೆ ಗಂಡನ ಪಿಂಚಣಿ ಮೊತ್ತ ಜಮೆ ಮಾಡಿಸಿದ್ದು ಪ್ರತಿಯಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್. ಎಂಬವರು ತಲಾ 5 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಇದರಿಂದ ನೊಂದ ಮಹಿಳೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರಂತೆ, ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಲಂಚದ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನೂ ಬಂಧಿಸಿದ್ದಾರೆ.
Mangalore The Karnataka Lokayukta, Mangaluru division, has taken into custody two officials from the Bantwal taluk treasury office after they were caught red-handed accepting a bribe from a complainant. The complainant’s husband, who was working as a secretary in a gram panchayat under Bantwal taluk, had retired in October 2023. He
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm