ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm