ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
04-05-26 04:14 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm