ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm