ಬ್ರೇಕಿಂಗ್ ನ್ಯೂಸ್
16-05-25 10:06 am Mangalore Correspondent ಕರಾವಳಿ
ಮಂಗಳೂರು, ಮೇ 16 : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಸಮುದ್ರ ಮಧ್ಯೆ ಮುಳುಗಡೆಯಾಗಿದ್ದು ಅದರಲ್ಲಿದ್ದ ಸಿಬ್ಬಂದಿಯನ್ನು ಲಕ್ಷದ್ವೀಪದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಮೇ 12ರಂದು ಲಕ್ಷದ್ವೀಪ ಹೊರಟಿದ್ದ ಸರಕು ಹಡಗು ಅಲ್ಲಿಂದ ಸುಮಾರು 60 ನಾಟಿಕಲ್ ಮೈಲು ದೂರದಲ್ಲಿದ್ದಾಗ ಮುಳುಗಡೆಯಾಗಿತ್ತು. ಹಡಗಿನಲ್ಲಿದ್ದ ತುರ್ತು ರಕ್ಷಣಾ ನೌಕೆಯ ಮೂಲಕ ಪಾರಾಗಿದ್ದು ಬಳಿಕ ಸ್ಥಳೀಯ ಮೀನುಗಾರರು ಮತ್ತು ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿ, ಮೇ 18ರಂದು ಆರು ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರು ಬಂದರಿನಿಂದ ಸಿಮೆಂಟ್, ಮರಳು, ತರಕಾರಿ ಹಾಗೂ ನಿರ್ಮಾಣ ಸಾಮಗ್ರಿ ಹೊತ್ತು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ 18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ.
ಹಡಗು ಮುಳುಗಿದ್ದರಿಂದ ಸಿಬ್ಬಂದಿ ಮೂರು ದಿನಗಳ ಕಾಲ ಸಮುದ್ರದಲ್ಲಿ ಆಹಾರವಿಲ್ಲದೇ ಕಳೆದಿದ್ದರು. ಕಲ್ಪೇಣಿ ದ್ವೀಪದ ಮೀನುಗಾರರು ಸಮುದ್ರದಲ್ಲಿ ಸಿಲುಕಿದ್ದ ಹಡಗಿನ ಕ್ಯಾಪ್ಟನ್ ಭಾಸ್ಕರನ್ ಹಾಗೂ ಸಿಬ್ಬಂದಿಯಾದ ನಾಗಲಿಂಗಂ, ನಲ್ಲಮುತ್ತು ಗೋಪಾಳ್, ಮಂಡಿದೇವನ್ ವೇಲು, ವಿಘ್ನೇಶ್, ಅಜಿತ್ ಕುಮಾರ್ ಎಸ್., ಕುಪ್ಪುರಾಮನ್, ಎಂ.ಮುರುಗನ್ ಅವರನ್ನು ರಕ್ಷಣೆ ಮಾಡಿದ್ದರು. ಪಾತಿಯನ್ನು ತಮ್ಮ ಮೀನುಗಾರಿಕಾ ದೋಣಿಯ ಮೂಲಕ ಕಲ್ಪೇಣಿ ದ್ವೀಪಕ್ಕೆ ಕರೆದೊಯ್ದು ಕರಾವಳಿ ರಕ್ಷಣಾ ಪಡೆಗೆ ಮಾಹಿತಿ ನೀಡಿದ್ದರು. ರಕ್ಷಣೆ ಮಾಡಲಾದ ಸಿಬ್ಬಂದಿಯನ್ನು ಕರಾವಳಿ ರಕ್ಷಣಾ ಪಡೆಯ ಕೊಚ್ಚಿ ನೆಲೆಗೆ ಕರೆದೊಯ್ಯಲಾಗಿದೆ’ ಎಂದು ಮಂಗಳೂರಿನ ಬಂದರು ದಕ್ಕೆಯ ಲತೀಫ್ ಬೆಂಗರೆ ತಿಳಿಸಿದ್ದಾರೆ.
‘ಹಡಗು ಮುಳುಗಿದ ಬಗ್ಗೆ ಮಂಗಳೂರು ಮತ್ತು ಲಕ್ಷದ್ವೀಪದ ಕರಾವಳಿ ರಕ್ಷಣಾ ಪಡೆಗೆ ಸಂತ್ರಸ್ತ ಮೀನುಗಾರರು ಮಾಹಿತಿ ನೀಡಿದ್ದರು. ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಕಡಲಿನಲ್ಲಿ ಸಿಲುಕಿದ್ದ ಸಿಬ್ಬಂದಿಗಾಗಿ ಮೇ 15ರಿಂದ 17ರ ವರೆಗೆ ಹುಡುಕಾಟ ನಡೆಸಿದ್ದರು. ಆದರೂ ಅವರು ಪತ್ತೆಯಾಗಿರಲಿಲ್ಲ’ ಎಂದರು.
Mangalore Cargo Ship Bound for Lakshadweep Sinks; Fishermen Rescue Crew After 3 Days Without Food or Water.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am