ಬ್ರೇಕಿಂಗ್ ನ್ಯೂಸ್
17-05-25 01:01 pm Mangalore Correspondent ಕರಾವಳಿ
ಮಂಗಳೂರು, ಮೇ.17: ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು, ಕಾರವಾರ ನಡುವೆ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025ರ ವರೆಗೆ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ಮಂಗಳೂರು - ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ. ಜೂನ್ನಿಂದ ನವೆಂಬರ್ ವರೆಗೆ ಎಂದರೆ ಒಟ್ಟು ಆರು ತಿಂಗಳ ಕಾಲ ರೈಲು ಸಂಚಾರ ಇರುವುದಿಲ್ಲ.
ಮೇ 31 ರಿಂದ 2025ರ ನವೆಂಬರ್ 1 ವರೆಗೆ ಪ್ರತಿ ಶನಿವಾರ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಸಂಚರಿಸುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು ಆಗಲಿದೆ. ಅದೇ ರೀತಿ ಜೂನ್ 1 ರಿಂದ ನವೆಂಬರ್ 2ರ ವರೆಗೆ ಪ್ರತಿ ಭಾನುವಾರ ಮಂಗಳೂರಿನಿಂದ ಯಶವಂತಪುರಕ್ಕೆ ತೆರಳುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಕೂಡ ಇರುವುದಿಲ್ಲ.
ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರದಿಂದ ಮಂಗಳೂರು ಜಂಕ್ಷನ್ ವರೆಗೆ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು ಆಗಲಿದೆ. ಇದರ ಜೊತೆಗೆ ಜೂನ್ 2ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದು ಆಗಲಿದೆ.
ಜೂನ್ 2 ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಗೆ ತೆರಳುವ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಸಂಚಾರ ಇರುವುದಿಲ್ಲ. ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.
Sakleshpur Subrahmanya Railway Electrification, Daytime Bengaluru Mangaluru Karwar Trains Cancelled for Six Months from June 1.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am