ಬ್ರೇಕಿಂಗ್ ನ್ಯೂಸ್
19-05-25 09:41 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ತಲೆಯ ಕೂದಲು ನಿರಂತರ ಉದುರುತ್ತಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ. ನನ್ನ ಕಿಡ್ನಿಗಳನ್ನ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಬಾವನಿಗೆ ದಾನ ಮಾಡುವಂತೆ ಡೆತ್ ನೋಟ್ ಬರೆದಿಟ್ಟು ಅವಿವಾಹಿತನೋರ್ವ ಮನೆ ಸಮೀಪದ ಶಾಲೆಯ ಛಾವಣಿಯ ಕಬ್ಬಿಣದ ಸಲಾಕೆಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡುವಿನಲ್ಲಿ ನಡೆದಿದೆ.
ಕುರ್ನಾಡು ಗ್ರಾಮದ ಹೂವಿನಕೊಪ್ಪಲ ನಿವಾಸಿ ದಿವಂಗತ ರಾಮ ಎಂಬವರ ಪುತ್ರ ಸುಧೀರ್ (32) ಆತ್ಮಹತ್ಯೆಗೈದ ಯುವಕ. ವೃತ್ತಿಯಲ್ಲಿ ಪೈಂಟರ್ ಆಗಿರುವ ಸುಧೀರ್ ಇಂದು ಬೆಳಗ್ಗೆ ಬಸ್ಸು ತಂಗುದಾಣದಲ್ಲಿ ಕುಳಿತಿರುವುದನ್ನ ಸ್ಥಳೀಯರು ಕಂಡಿದ್ದರು. ಸುಧೀರ್ ಮೊಬೈಲ್ ಹಾಗೂ ಪರ್ಸನ್ನ ಮನೆಯಲ್ಲೇ ಬಿಟ್ಟು ತೆರಳಿದ್ದನಂತೆ. ಬಳಿಕ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಸುಧೀರ್ ನೇಣು ಬಿಗಿದುದನ್ನ ಅಂಗನವಾಡಿ ಶಿಕ್ಷಕಿ ನೋಡಿದ್ದಾರೆ.
ಕೊಣಾಜೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಮೃತ ಸುಧೀರ್ ಅವರ ಶರ್ಟ್ ಜೇಬಲ್ಲಿ ಡೆತ್ ನೋಟ್ ದೊರೆತಿದೆ. ನನ್ನ ತಲೆ ಕೂದಲು ನಿರಂತರವಾಗಿ ಉದುರುತ್ತಿದ್ದು, ತನ್ನ ಕಿಡ್ನಿಗಳನ್ನ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಬಾವ (ಅಕ್ಕನ ಗಂಡ)ನಿಗೆ ದಾನ ಮಾಡಿ. ಅಣ್ಣನ ಮದುವೆಯನ್ನ ಸಾಂಗವಾಗಿ ನಡೆಸಿ ಎಂದು ಡೆತ್ ನೋಟಲ್ಲಿ ಬರೆದಿರುವುದಾಗಿ ತಿಳಿದು ಬಂದಿದೆ.
ಇದೇ ಮೇ ತಿಂಗಳ 29 ರಂದು ಮೃತ ಸುಧೀರ್ ಅವರ ಅಣ್ಣನ ಮದುವೆ ಬೋಳಿಯಾರಿನ ಖಾಸಗಿ ಸಭಾಂಗಣದಲ್ಲಿ ನಿಗದಿಯಾಗಿತ್ತು. ಆದರೀಗ ಮನೆ ಮಗನ ಅಕಾಲಿಕ ಅಗಲಿಕೆಯಿಂದ ಮನೆ ಮಂದಿ ದಿಗ್ಬ್ರಾಂತರಾಗಿದ್ದಾರೆ. ಇನ್ನು ಸುಧೀರ್ ಸಾವಿಗೆ ಬೇರೆಯೇ ಕಾರಣಗಳಿವೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದತ್ತಾತ್ರೇಯ ಅನುದಾನಿತ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದ ಸುಧೀರ್ ಅದೇ ಶಾಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ವಿಪರ್ಯಾಸ. ಕೂದಲು ಉದುರುವ ಸಮಸ್ಯೆಗಾಗಿ ಆತ್ಮಹತ್ಯೆಗೈದಿರುವುದನ್ನ ನನ್ನ ವೃತ್ತಿ ಜೀವನದಲ್ಲೇ ಮೊದಲು ಕೇಳಿರುವುದಾಗಿ ಕೊಣಾಜೆ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
Mangalore Youth Dies by Suicide After Hair Loss Struggle at Konaje, Donates Kidneys in Death Note. The deceased has been identified as Sudheer (32).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm