ಬ್ರೇಕಿಂಗ್ ನ್ಯೂಸ್
19-05-25 10:14 pm Mangalore Correspondent ಕರಾವಳಿ
ಮಂಗಳೂರು, ಮೇ 19 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ಇತ್ತೀಚೆಗಷ್ಟೆ ಬಂಧಿತನಾಗಿದ್ದ ನಟೋರಿಯಸ್ ರೌಡಿ ಫರಂಗಿಪೇಟೆ ನಿವಾಸಿ ಚೊಟ್ಟೆ ನೌಶಾದ್ ಮೇಲೆ ಮಂಗಳೂರು ಜೈಲಿನಲ್ಲಿ ಸಹ ಕೈದಿಗಳು ಹಲ್ಲೆ ನಡೆಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಜೈಲಿನಲ್ಲೇ ಪ್ರತೀಕಾರ ತೀರಿಸಲಾಗುತ್ತದೆ ಎಂಬ ಮಾಹಿತಿ ಇದ್ದುದರಿಂದ ಪೊಲೀಸರು ನಿಗಾ ಇಟ್ಟಿದ್ದರು. ಇಂದು ಸಂಜೆ ಏಳು ಗಂಟೆ ಸುಮಾರಿಗೆ ಸೆಲ್ ಒಳಗಡೆಯೇ ಹಲ್ಲೆ ನಡೆಸಿದ್ದು ಪೊಲೀಸರು ಮೊದಲೇ ನಿಗಾ ಇಟ್ಟಿದ್ದರಿಂದ ಆರೋಪಿ ಅಪಾಯದಿಂದ ಪಾರಾಗಿದ್ದಾನೆ. ಹಲ್ಲೆ ಸಂದರ್ಭದಲ್ಲಿ ಜೈಲು ಒಳಗಿನಿಂದ ಬೊಬ್ಬೆ ಕೇಳಿದ್ದು ಪಕ್ಕದ ಕಟ್ಟಡದ ಮೇಲಿದ್ದವರು ಇದರ ವಿಡಿಯೋ ಮಾಡಿದ್ದು ವೈರಲ್ ಆಗಿದೆ.


ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಿದ್ದು ಕೊನೆಗೆ ಬಂಧನ ಆಗಿದ್ದ ನೌಶಾದ್ ಪೊಲೀಸರ ಕಸ್ಟಡಿಯಲ್ಲಿದ್ದ. ಸೋಮವಾರ (ಇಂದು) ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ಹಾಕಲಾಗಿತ್ತು. ಅಷ್ಟರಲ್ಲಿಯೇ ಆತನ ಮೇಲೆ ಸಹ ಕೈದಿಗಳು ಹಲ್ಲೆ ನಡೆಸಿದ್ದಾರೆ.
ಜೈಲಿನಲ್ಲಿ ಪ್ರತೀಕಾರ ತೀರಿಸಲು ಸಂಚು ನಡೆದಿದೆ ಎನ್ನುವ ಬಗ್ಗೆ ಗುಪ್ತಚರ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಹೀಗಾಗಿ ಪ್ರಕರಣ ಸಂಬಂಧಪಟ್ಟ ಎಲ್ಲ ಆರೋಪಿಗಳನ್ನೂ ಮೈಸೂರು, ಬೆಳಗಾವಿ, ಧಾರವಾಡ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ. ಮಾಹಿತಿ ಪ್ರಕಾರ, ಸಂಜೆಯ ವೇಳೆ ಕೈದಿಗಳನ್ನು ಸೆಲ್ ನಿಂದ ಹೊರಬಿಟ್ಟು ದೈನಂದಿನ ಅಗತ್ಯ ಕೆಲಸಕ್ಕೆ ಸಮಯ ನೀಡುತ್ತಾರೆ. ಈ ವೇಳೆ, ಜೈಲು ಅಧಿಕಾರಿಗಳ ಅನುಮತಿ ಪಡೆದು ಮತ್ತೊಂದು ಸೆಲ್ ನಲ್ಲಿದ್ದ ತನ್ನ ಸಹವರ್ತಿಯನ್ನು ಕಂಡು ನೌಶಾದ್ ಮಾತನಾಡಿಸಲು ಮುಂದಾಗಿದ್ದ. ಇದೇ ವೇಳೆ, ಬೇರೊಬ್ಬ ಕೈದಿ ನೌಶಾದ್ ಮೇಲೆರಗಿದ್ದು ಕಲ್ಲು ಮತ್ತು ತನ್ನ ಕೈಲಿದ್ದ ತಗಡಿನಾಕಾರದ ಆಯುಧ ಬಳಸಿ ಹಲ್ಲೆ ನಡೆಸಿದ್ದಾನೆ. ಕೂಡಲೇ ಜೈಲು ಸಿಬಂದಿ ಕೈದಿಯನ್ನು ಹಿಡಿದಿಟ್ಟು ರಕ್ಷಣೆ ಮಾಡಿದ್ದಾರೆ.
ನೌಶಾದ್ ನನ್ನು ಕೋರ್ಟ್ ಪ್ರಕ್ರಿಯೆ ಮುಗಿದ ಕೂಡಲೇ ಮೈಸೂರು ಜೈಲಿಗೆ ಶಿಫ್ಟ್ ಮಾಡಲು ತಯಾರಿ ಆಗಿತ್ತು. ಘಟನೆ ಸಂಬಂಧಿಸಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜೈಲಿನಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವ ಬಗ್ಗೆ ಚಿಂತನೆ ನಡೆದಿದೆ.
An attempted retaliatory attack on one of the accused in the Suhas Shetty murder case inside the Mangaluru jail was foiled, thanks to timely intelligence inputs received by the police. However, with police custody of accused Chotte Naushad ending Monday, May 19, he was brought back to Mangaluru to be produced before the court. After court formalities, police were preparing to shift him to Mysuru jail.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm