ಬ್ರೇಕಿಂಗ್ ನ್ಯೂಸ್
20-05-25 02:03 pm Mangalore Correspondent ಕರಾವಳಿ
ಮಂಗಳೂರು, ಮೇ 20 : ಮಂಗಳೂರು, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಬೆಳಗ್ಗಿನಿಂದ ಉತ್ತಮ ಮಳೆಯಾಗಿದೆ. ರಾತ್ರಿಯಿಂದಲೇ ನಿರಂತರ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ನೆಲ ಒಮ್ಮಿಂದೊಮ್ಮೆಲೆ ತಂಪಗಾಗಿದೆ. ಗಾಳಿ, ಸಿಡಿಲಿನ ಅಬ್ಬರ ಇಲ್ಲದೆ ಸಾಧಾರಣ ರೀತಿಯಲ್ಲಿ ಮಳೆ ಸುರಿಯತೊಡಗಿದ್ದು ಮಳೆಗಾಲದ ಅನುಭವ ನೀಡಿದೆ.
ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಬಹುತೇಕ ಭಾಗದಲ್ಲಿ ಒಂದೇ ರೀತಿಯಲ್ಲಿ ಮಳೆಯಾಗಿದೆ. ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಮೇ ಆರಂಭದಲ್ಲಿಯೇ ಒಳ್ಳೆ ಮಳೆ ಆಗಿದ್ದರೂ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಒಳ್ಳೆಯ ಮಳೆ ಆಗಿರಲಿಲ್ಲ.




ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು ಹೆಲ್ತ್ ಹಬ್ ಎನಿಸಿರುವ ಮಣಿಪಾಲದಲ್ಲಿ ಹೆದ್ದಾರಿಯಲ್ಲಿ ನದಿಯಂತೆ ನೀರು ಹರಿಯುವ ವಿಡಿಯೋ ವೈರಲ್ ಆಗಿದೆ. ಉಡುಪಿ- ಮಣಿಪಾಲ ರಸ್ತೆಯಲ್ಲಿ ಕೃತಕ ಪ್ರವಾಹದ ರೀತಿಯಲ್ಲಿ ಮಳೆ ನೀರು ಹರದಿದ್ದು ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿ ರಸ್ತೆಯಲ್ಲಿ ಪ್ರವಾಹದ ರೀತಿ ಕಲ್ಲು ಮಣ್ಣಿನ ಜೊತೆಗೆ ನೀರು ಹರಿದಿದ್ದು, ಘಟ್ಟ ಕುಸಿದು ಬಂದ ರೀತಿಯ ಅನುಭವ ಆಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿದಿದೆ.
ಎರಡು ದಿನ ಭಾರೀ ಮಳೆ ಸೂಚನೆ
ಹವಾಮಾನ ಇಲಾಖೆಯಿಂದ ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ಮೇ 20 ಮತ್ತು 21ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದ್ದು ಈಗಾಗಲೇ ಮೀನುಗಾರಿಕೆ ತೆರಳಿದವರು ಮರಳುವಂತೆ ಸೂಚಿಸಲಾಗಿದೆ.
Heavy #rainfall that began early Tuesday, May 20 morning has once again triggered artificial flooding along the crucial #Udupi-#Manipal Road, causing severe inconvenience to commuters.#mangalore pic.twitter.com/arFDGlYThX
— Headline Karnataka (@hknewsonline) May 20, 2025
Heavy rainfall that began early Tuesday, May 20 morning has once again triggered artificial flooding along the crucial Udupi-Manipal Road, causing severe inconvenience to commuters.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm