ಬ್ರೇಕಿಂಗ್ ನ್ಯೂಸ್
21-12-20 02:45 pm Mangalore Correspondent ಕರಾವಳಿ
ಉಳ್ಳಾಲ ಡಿ.21: ಇಲ್ಲಿನ ದೇರಳಕಟ್ಟೆಯ ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ತಜ್ಞ ವೈದ್ಯರ ತಂಡದಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಾಲ್ಕು ವರ್ಷದ ಮಗುವಿನ ಕಾಲಿನ ತೊಡೆಯಲ್ಲಿ ಕ್ಯಾನ್ಸರ್ ಬಾಧಿತ ಎಲುಬಿನ ಅಸ್ಥಿಮಜ್ಜೆಯ ಮೇಲೆ ಅಪರೂಪದ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದ್ದು ಇದೊಂದು ಅಪರೂಪದ ಮತ್ತು ಭಾರತದಲ್ಲೇ ಪ್ರಥಮ ಪ್ರಯೋಗವಾಗಿದೆ ಎಂದು ಯೆನೆಪೋಯ ಮೆಡಿಕಲ್ ಕಾಲೇಜಿ ವೈದ್ಯಕೀಯ ಅಧೀಕ್ಷಕ ಡಾ.ಪದ್ಮನಾಭ ಹೇಳಿದ್ದಾರೆ.
ಯೆನೆಪೋಯ ಮೆಡಿಕಲ್ ಕಾಲೇಜಿನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು. ನಾಲ್ಕು ವರ್ಷದ ಮಗುವಿನ ಕುಟುಂಬವು ಈ ಸಮಸ್ಯೆಯ ಬಗ್ಗೆ ಅರಿವಾಗಿ ಭಾರತದ ಹಲವಾರು ಪರಿಣಿತ ಕ್ಯಾನ್ಸರ್ ಶಸ್ತ್ರಚಿಕಿತ್ಸಕರನ್ನು ಸಂದರ್ಶಿಸಿದಾಗ ಕ್ಯಾನ್ಸರ್ ಬಾಧಿತ ಕಾಲಿನ ಭಾಗವನ್ನು ತುಂಡರಿಸುವುದೇ ಪರಿಹಾರ ಎಂದು ತಿಳಿಸಿದ್ದರು.
ಬಳಿಕ ಯೆನಪೋಯ ಮೆಡಿಕಲ್ ಕಾಲೇಜಿನ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಜಲಾಲುದ್ದೀನ್ ಅಕ್ಬರ್ ಅವರನ್ನು ಭೇಟಿ ಮಾಡಿ ವಿಚಾರಿಸಿದ್ದರು. ಬಳಿಕ ಉಪಕುಲಪತಿ ಡಾ.ವಿಜಯಕುಮಾರ್ ಅವರ ಮಾರ್ಗದರ್ಶನದೊಂದಿಗೆ ಕಾಲು ಕತ್ತರಿಸದೆಯೇ ಮಗುವಿಗೆ ಚಿಕಿತ್ಸೆ ನೀಡುವ ಬಗ್ಗೆ ತೀರ್ಮಾನಿಸಲಾಗಿತ್ತು. ಸತತ ಆರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿ ಮಗುವಿನ ಕಾಲು ಮತ್ತು ಜೀವವನ್ನು ರಕ್ಷಿಸುವ ಪಣದೊಂದಿಗೆ ಅಪರೂಪದ ಯಶಸ್ವೀ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು.
ಸುಮಾರು ಒಂದೂವರೆ ಲಕ್ಷ ರೂ. ವೆಚ್ಚದಲ್ಲಿ ಆರು ಗಂಟೆಯ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಅಲ್ಲದೆ ಇಂತಹ ಕ್ಯಾನ್ಸರ್ ಪೀಡಿತ ಕಾಲಿನ ಅಂಗನ್ಯೂನ್ಯತೆ ಸರಿಪಡಿಸುವ ಬಹಳ ವಿರಳವಾಗಿ ನಡೆಯುವ ಶಸ್ತ್ರಚಿಕಿತ್ಸೆಯನ್ನು ಯೆನೆಪೋಯದ ಪರಿಣಿತ ವೈದ್ಯರುಗಳ ತಂಡವು ಯಶಸ್ವಿಯಾಗಿ ನಡೆಸಿ ನಾಲ್ಕು ವರ್ಷಗಳ ಮಗುವಿನ ಕಾಲು ಹಾಗೂ ಜೀವದ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದೆ.

ಈ ಅಪರೂಪದ ಶಸ್ತ್ರಚಿಕಿತ್ಸೆಯಲ್ಲಿ ಯೆನೆಪೋಯ ಕ್ಯಾನ್ಸರ್ ಸೆಂಟರಿನ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ವಿಭಾಗದ ಡಾ.ರೋಹನ್ ಶೆಟ್ಟಿ ,ಡಾ.ಅಮರ್ ರಾವ್, ಡಾ.ನೂರ್ ಮಹಮ್ಮದ್, ಆರ್ಥೋಪೆಡಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ.ಇಮ್ತಿಯಾಝ್ ಅಹ್ಮದ್, ಡಾ.ಅಭಿಷೇಕ್ ಶೆಟ್ಟಿ, ಅರಿವಳಿಕೆ ವಿಭಾಗದ ಡಾ.ಎಜಾಝ್, ಮಕ್ಕಳ ಚಿಕಿತ್ಸಾ ವಿಭಾಗದ ಡಾ.ಮಿಥುನ್ ಪಾಲ್ಗೊಂಡಿದ್ದರು.
ಭಾರತದಲ್ಲೇ ಪ್ರಥಮ ಪ್ರಯೋಗ
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥರಾದ ಡಾ.ಜಲಾಲುದ್ದೀನ್ ಅಕ್ಬರ್ ಅವರು ಮಾಹಿತಿ ನೀಡಿ ಸಾಮಾನ್ಯವಾಗಿ ಇಂತಹ ಕ್ಯಾನ್ಸರ್ ಬಾಧಿತ ಚಿಕಿತ್ಸೆಯನ್ನು ಕಾಲುಗಳನ್ನು ಕತ್ತರಿಸಿಯೇ ಪರಿಹಾರ ಕಂಡುಕೊಳ್ಳುವುದು ಕಾಣುತ್ತೇವೆ. ರೋಗಭಾದಿತ ಅಂಗಗಳ ಛೇದನ ಮಾಡದೆಯೇ ಪರಿಣಿತ ವೈದ್ಯರು ಮತ್ತು ಆಧುನಿಕ ವೈದ್ಯಕೀಯ ಪರಿಕರ ಮತ್ತು ಉಪಕರಣಗಳಿಂದ ಶಸ್ತ್ರಚಿಕಿತ್ಸೆ ನೆರವೇರಿಸಿರುವುದು ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾನಿಲಯದ ಕ್ಯಾನ್ಸರ್ ಸೆಂಟರಿನ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ವಿಭಾಗದ ವೈದ್ಯರುಗಳ ಸಾಧನೆಯಾಗಿದೆ. ಅಲ್ಲದೆ ಇದು ಬಹಳ ಅಪರೂಪದ ಮತ್ತು ಭಾರತದಲ್ಲಿ ಇಷ್ಟು ಸಣ್ಣ ವಯಸ್ಸಿನ ಮಕ್ಕಳಲ್ಲಿ ಇಂತಹ ಚಿಕಿತ್ಸೆ ನಡೆದಿರುವುದು ಇದೇ ಪ್ರಥಮ ಆಗಿದೆ ಎಂದರು.
Mangalore Yenepoya Hopsital Doctors perform a rare Leg operation of a little boy which is of First in India.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm