ಬ್ರೇಕಿಂಗ್ ನ್ಯೂಸ್
22-05-25 10:19 pm Mangalore Correspondent ಕರಾವಳಿ
ಉಳ್ಳಾಲ, ಮೇ 22 : ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್ ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ.




ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನ ತಡೆದಿದ್ದು ಅವರನ್ನೂ ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಶಿವಸಾಗರ್ ಹೊಟೇಲಿನ ಮಾಲಕ ಸುಚಿವೃತ ಶೆಟ್ಟಿ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ಪುಂಡ ರಿಕ್ಷಾ ಚಾಲಕರನ್ನ ಅಂಗಡಿಯಿಂದ ಹೊರ ತಳ್ಳಿದ್ದಾರೆ. ಘಟನೆಯ ದೃಶ್ಯವು ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೇಕರಿ ಮಾಲಕ ಅಶ್ವಿನ್ ಅವರು ತನ್ನ ಮತ್ತು ತಾಯಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ನೀಡಿರುವ ರಿಕ್ಷಾ ಚಾಲಕರಾದ ಬಶೀರ್ ಮತ್ತು ಇಷಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಬಜ್ಪೆಯಲ್ಲಿ ನಡೆದಿರುವ ಸುಹಾಸ್ ಶೆಟ್ಟಿ ಕೊಲೆಯ ಕಿಚ್ಚು ಜೀವಂತ ಇರುವಾಗಲೇ ಗೂಂಡಾ ರಿಕ್ಷಾ ಚಾಲಕರು ಬೇಕರಿಗೆ ನುಗ್ಗಿ ಧಾಂದಲೆ ನಡೆಸಿರುವುದು ಪೊಲೀಸ್ ಇಲಾಖೆಯನ್ನೂ ಅಲರ್ಟ್ ಮಾಡಿಸಿದೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
#Mangalore Bakery Owner Assaulted for Asking to Move Parked Tempo, #Auto Drivers #Rowdyism at #Thokottu Junction Caught on CCTV #breakingnews pic.twitter.com/JVUVyMas63
— Headline Karnataka (@hknewsonline) May 22, 2025
Mangalore Bakery Owner Assaulted for Asking to Move Parked Tempo, Auto Drivers Rowdyism at Thokottu Junction Caught on CCTV.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm