ಬ್ರೇಕಿಂಗ್ ನ್ಯೂಸ್
22-05-25 10:19 pm Mangalore Correspondent ಕರಾವಳಿ
ಉಳ್ಳಾಲ, ಮೇ 22 : ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್ ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ.




ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನ ತಡೆದಿದ್ದು ಅವರನ್ನೂ ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಶಿವಸಾಗರ್ ಹೊಟೇಲಿನ ಮಾಲಕ ಸುಚಿವೃತ ಶೆಟ್ಟಿ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ಪುಂಡ ರಿಕ್ಷಾ ಚಾಲಕರನ್ನ ಅಂಗಡಿಯಿಂದ ಹೊರ ತಳ್ಳಿದ್ದಾರೆ. ಘಟನೆಯ ದೃಶ್ಯವು ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೇಕರಿ ಮಾಲಕ ಅಶ್ವಿನ್ ಅವರು ತನ್ನ ಮತ್ತು ತಾಯಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ನೀಡಿರುವ ರಿಕ್ಷಾ ಚಾಲಕರಾದ ಬಶೀರ್ ಮತ್ತು ಇಷಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಬಜ್ಪೆಯಲ್ಲಿ ನಡೆದಿರುವ ಸುಹಾಸ್ ಶೆಟ್ಟಿ ಕೊಲೆಯ ಕಿಚ್ಚು ಜೀವಂತ ಇರುವಾಗಲೇ ಗೂಂಡಾ ರಿಕ್ಷಾ ಚಾಲಕರು ಬೇಕರಿಗೆ ನುಗ್ಗಿ ಧಾಂದಲೆ ನಡೆಸಿರುವುದು ಪೊಲೀಸ್ ಇಲಾಖೆಯನ್ನೂ ಅಲರ್ಟ್ ಮಾಡಿಸಿದೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
#Mangalore Bakery Owner Assaulted for Asking to Move Parked Tempo, #Auto Drivers #Rowdyism at #Thokottu Junction Caught on CCTV #breakingnews pic.twitter.com/JVUVyMas63
— Headline Karnataka (@hknewsonline) May 22, 2025
Mangalore Bakery Owner Assaulted for Asking to Move Parked Tempo, Auto Drivers Rowdyism at Thokottu Junction Caught on CCTV.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm