ಬ್ರೇಕಿಂಗ್ ನ್ಯೂಸ್
22-05-25 10:19 pm Mangalore Correspondent ಕರಾವಳಿ
ಉಳ್ಳಾಲ, ಮೇ 22 : ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್ ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ.




ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನ ತಡೆದಿದ್ದು ಅವರನ್ನೂ ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಶಿವಸಾಗರ್ ಹೊಟೇಲಿನ ಮಾಲಕ ಸುಚಿವೃತ ಶೆಟ್ಟಿ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ಪುಂಡ ರಿಕ್ಷಾ ಚಾಲಕರನ್ನ ಅಂಗಡಿಯಿಂದ ಹೊರ ತಳ್ಳಿದ್ದಾರೆ. ಘಟನೆಯ ದೃಶ್ಯವು ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೇಕರಿ ಮಾಲಕ ಅಶ್ವಿನ್ ಅವರು ತನ್ನ ಮತ್ತು ತಾಯಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ನೀಡಿರುವ ರಿಕ್ಷಾ ಚಾಲಕರಾದ ಬಶೀರ್ ಮತ್ತು ಇಷಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಬಜ್ಪೆಯಲ್ಲಿ ನಡೆದಿರುವ ಸುಹಾಸ್ ಶೆಟ್ಟಿ ಕೊಲೆಯ ಕಿಚ್ಚು ಜೀವಂತ ಇರುವಾಗಲೇ ಗೂಂಡಾ ರಿಕ್ಷಾ ಚಾಲಕರು ಬೇಕರಿಗೆ ನುಗ್ಗಿ ಧಾಂದಲೆ ನಡೆಸಿರುವುದು ಪೊಲೀಸ್ ಇಲಾಖೆಯನ್ನೂ ಅಲರ್ಟ್ ಮಾಡಿಸಿದೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
#Mangalore Bakery Owner Assaulted for Asking to Move Parked Tempo, #Auto Drivers #Rowdyism at #Thokottu Junction Caught on CCTV #breakingnews pic.twitter.com/JVUVyMas63
— Headline Karnataka (@hknewsonline) May 22, 2025
Mangalore Bakery Owner Assaulted for Asking to Move Parked Tempo, Auto Drivers Rowdyism at Thokottu Junction Caught on CCTV.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm