ಬ್ರೇಕಿಂಗ್ ನ್ಯೂಸ್
22-05-25 10:29 pm Mangalore Correspondent ಕರಾವಳಿ
ಮಂಗಳೂರು, ಮೇ 22 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆ ಪೇಟೆಯಲ್ಲಿ ಮೇ 25ರಂದು ಜನಾಗ್ರಹ ಸಭೆ ಮತ್ತು ಶ್ರದ್ಧಾಂಜಲಿ ಸಭೆ ನಡೆಯಲಿದೆ.
ಮೇ 25ರ ಭಾನುವಾರ ಸಂಜೆ 3.30 ಗಂಟೆಗೆ ಬಜ್ಪೆ ಜಂಕ್ಷನ್ನಲ್ಲಿರುವ ಶಾರದಾ ಮಂಟಪ ಬಳಿ ಸಭೆ ನಡೆಯಲಿದ್ದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಪ್ರಮುಖ ಭಾಷಣ ಮಾಡಲಿದ್ದಾರೆ. ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಮಂಗಳೂರು ಮಹಾನಗರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗದ ಅಧ್ಯಕ್ಷ ಪುರುಷೋತ್ತಮ ತಿಳಿಸಿದ್ದಾರೆ.
ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ
ಮಂಗಳೂರು - ಸುರತ್ಕಲ್ - ಕಾವೂರು ಭಾಗದಿಂದ ಬರುವ ವಾಹನಗಳಿಗೆ ಬಜ್ಪೆ ನಾರಾಯಗುರು ಮಂದಿರ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುರುಪುರ - ವಾಮಂಜೂರು - ಮಳಲಿ ಕಡೆಯಿಂದ ಬರುವ ವಾಹನಗಳಿಗೆ ಸಂಜೀವ ಶೆಟ್ಟಿ ಸಭಾಭವನ ಮತ್ತು ಪಕ್ಕದ ಮೈದಾನದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಲ್ಕಿ ಮೂಡುಬಿದ್ರೆಯಿಂದ ಬರುವ ವಾಹನಗಳಿಗೆ ಕನ್ನಿಕಾ ನಿಲಯ ಮೈದಾನ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಹಿಂದುಗಳನ್ನು ಭಯಪಡಿಸುವ ಉದ್ದೇಶದಿಂದ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ವಿದೇಶದಿಂದಲೂ ಫಂಡಿಂಗ್ ಆಗಿತ್ತು. ಹೀಗಾಗಿ ಎನ್ಐಎ ತನಿಖೆ ಆಗಬೇಕೆಂದು ಒತ್ತಾಯ ಮಾಡುತ್ತಿದ್ದೇವೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಬೇಕೆಂದು ಅವರು ಕೇಳಿಕೊಂಡಿದ್ದಾರೆ.
Vishva Hindu Parishad (VHP) will organise a “janagraha sabhe” near Sharada Mantapa at Bajpe Junction here on May 25 seeking NIA probe into the murder of Suhas Shetty, a rowdy sheeter and Hindutva activist, who was murdered near Bajpe on May 1.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm