ಬ್ರೇಕಿಂಗ್ ನ್ಯೂಸ್
23-05-25 05:38 pm Mangalore Correspondent ಕರಾವಳಿ
ಮಂಗಳೂರು, ಮೇ 23 : ಎತ್ತಿಗೆ ಜ್ವರ ಬಂದರೆ, ಕೋಣಕ್ಕೆ ಬರೆ ಎಳೆದರು ಎನ್ನುವ ಹಾಗೆ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಹಿಂದೂ ಕಾರ್ಯಕರ್ತರನ್ನ ಮನೆಯಲ್ಲಿ ಇರೋದಕ್ಕೆ ಬಿಡದೆ ಗಡೀಪಾರು ಕೆಲಸ ಆರಂಭಿಸಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಸಿದ್ದರಾಮಯ್ಯ ಅವರ ಸರಕಾರ ನಿಷ್ಪಕ್ಷಪಾತ ತನಿಖೆ ನಡೆಸದೇ ಮತ್ತೆ ಹಿಂದು ಕಾರ್ಯಕರ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಆ ಕೊಲೆ ಪ್ರಕರಣದ ಹಿಂದೆ ಯಾರಿದ್ದಾರೆ? ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಹಣ ಬಂದಿದ್ದು ಹೇಗೆ? ಇದ್ಯಾವುದರ ಬಗ್ಗೆಯೂ ತನಿಖೆ ನಡೆಸದೆ, ಸ್ವತಃ ಪೊಲೀಸ್ ಇಲಾಖೆಯಲ್ಲೇ ಕೆಲವರ ಬೆಂಬಲದಿಂದ ಈ ಹತ್ಯೆ ನಡೆದಿರುವ ಬಗ್ಗೆ ಅನುಮಾನ ಇದ್ದರೂ ಅವರ ಕೈಯಲ್ಲೇ ತನಿಖೆ ನಡೆಸಿದ್ರೆ ನ್ಯಾಯ ಸಿಗುವುದು ಹೇಗೆ? ಎಂದು ಯುವಮೋರ್ಚಾ ದ.ಕ. ಜಿಲ್ಲಾಧ್ಯಕ್ಷ ನಂದನ್ ಮಲ್ಯ ಪ್ರಶ್ನಿಸಿದ್ದಾರೆ.
ಜಿಹಾದಿಗಳಿಗೆ ರಾಜ್ಯ ಸರ್ಕಾರದ ಬೆಂಬಲವೂ ಇದ್ದು, ಸರಿಯಾದ ಮಾರ್ಗದಲ್ಲಿ ತನಿಖೆ ನಡೆಯೋದು ಅನುಮಾನವೇ. ಹೀಗಾಗಿ ಪ್ರಕರಣವನ್ನ ಎನ್ಐಎಗೆ ವಹಿಸಬೇಕು. ರಾಷ್ಟ್ರೀಯ ತನಿಖಾ ದಳದಿಂದ ಮಾತ್ರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಲು ಸಾಧ್ಯ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನ ಎನ್ಐಎಗೆ ವಹಿಸಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಜ್ಪೆ ಚಲೋ ಆಯೋಜಿಸಿದ್ದು, ಇಡೀ ಹಿಂದೂ ಸಮುದಾಯ, ಹಿಂದೂ ಕಾರ್ಯಕರ್ತರು, ಸಂಘಟನೆಗಳ ಜೊತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಬಜ್ಪೆ ಚಲೋವನ್ನ ಬೆಂಬಲಿಸಲಿದೆ.
25ರಂದು ಮಧ್ಯಾಹ್ನ ಮೂರು ಗಂಟೆಗೆ ಬಜ್ಪೆಯ ಶಾರದಾ ಮಂಟಪದ ಬಳಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಎಲ್ಲಾ ರಾಷ್ಟ್ರೀಯವಾದಿಗಳು, ಹಿಂದೂಗಳು, ಹಿಂದೂ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಸಮಯ ನೀಡಿ ಕೈ ಜೋಡಿಸಬೇಕಾಗಿ ವಿಶ್ವ ಹಿಂದೂ ಪರಿಷತ್ ಕೇಳಿಕೊಂಡಿದೆ. ಅದರಂತೆ ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ವಿಶ್ವ ಹಿಂದು ಪರಿಷತ್ನ ಬಜ್ಪೆ ಚಲೋಗೆ ಬೆಂಬಲ ಘೋಷಿಸುತ್ತಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನ NIA ಗೆ ರಾಜ್ಯ ಸರ್ಕಾರ ವಹಿಸುವ ವರೆಗೂ ಬಿಜೆಪಿ ಯುವಮೋರ್ಚಾ ಸುಮ್ಮನೆ ಕೂರುವುದಿಲ್ಲ. ವಿಶ್ವ ಹಿಂದು ಪರಿಷತ್ ಜೊತೆ ಭಾರತೀಯ ಜನತಾ ಪಾರ್ಟಿ ಸದಾ ಇರಲಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ ಮಲ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore How Can Police Investigate Suhas Shetty Murder Amid Allegations of Their Involvement ? BJP Nandan Mallya Backs VHP Bajpe Chalo Protest
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am