ಬ್ರೇಕಿಂಗ್ ನ್ಯೂಸ್
23-05-25 10:46 pm Mangalore Correspondent ಕರಾವಳಿ
ಮಂಗಳೂರು, ಮೇ 23:ಹಣ ದುರುಪಯೋಗ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಚೇರಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಿರೀಕ್ಷಕರಾದ ಸುರೇಶ್ ಕುಮಾರ್ ಮತ್ತು ಭಾರತಿ ಜಿ. ಅವರು ದಾಳಿ ನಡೆಸಿದ್ದು, ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ನಿಸರ್ಗಧಾಮದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಜೈವಿಕ ಉದ್ಯಾನವನ ಮತ್ತು ನಿಸರ್ಗಧಾಮದಲ್ಲಿ ಪ್ರಾಣಿಗಳ ಸಾಗಣೆ ಮತ್ತು ವಹಿವಾಟು ವಿಚಾರದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಹಿಂದಿನಿಂದಲೂ ದೂರುಗಳಿದ್ದವು.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬರುತ್ತದೆ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬರುತ್ತದೆ.
ಅಲ್ಲದೆ, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂಬುದಾಗಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
Mangalore Misuse of Funds Allegation, Lokayukta Raid and Officials Inspection at Pilikula Nisargadham.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am