ಬ್ರೇಕಿಂಗ್ ನ್ಯೂಸ್
26-05-25 07:09 pm Bangalore Correspondent ಕರಾವಳಿ
ಮಂಗಳೂರು, ಮೇ 26 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜ್ಪೆ ಪೇಟೆಯಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಆಯೋಜಿಸಿದ್ದ ಜನಾಗ್ರಹ ಸಭೆಗೆ ಪೊಲೀಸ್ ಅನುಮತಿ ಪಡೆದಿರಲಿಲ್ಲವೆಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆಯ ಶಾರದಾ ಮಂಟಪದ ಬಳಿ ಬಜ್ಪೆ ಚಲೋ ಎನ್ನುವ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಪಡೆದಿರಲಿಲ್ಲ. ಪೊಲೀಸ್ ಅನುಮತಿ ಪಡೆಯದೆ ನಡೆಸಿದ ಕಾರ್ಯಕ್ರಮದಲ್ಲಿ ಮೂರು ಸಾವಿರದಷ್ಟು ಜನರು ಪಾಲ್ಗೊಂಡಿದ್ದರು. ಕಾನೂನು ವಿರುದ್ಧವಾಗಿ ಬಜ್ಪೆ ಪೇಟೆಯಲ್ಲಿ ಜನರು ಸೇರಿದ್ದು, ಆಮೂಲಕ ಬಜ್ಪೆಗೆ ಹೋಗುವ ಮತ್ತು ಹಿಂತಿರುಗುವ ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.

ಇದಲ್ಲದೆ, ಪ್ರತಿಭಟನೆ ಸಂದರ್ಭದಲ್ಲಿ ಭಾಷಣಕಾರ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಹೇಳಿ ಜನರನ್ನು ಪ್ರಚೋದಿಸಿದ್ದು, ಇದರಿಂದ ಕೋಮು ಸೌಹಾರ್ದ ಕದಡುವ ಯತ್ನ ಮಾಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯಲ್ಲಿ ಪೊಲೀಸರು ಆಯೋಜಕರು ಮತ್ತು ಭಾಷಣಕಾರನ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ ಗಳಾದ 189(2), 191(2), 285, 192, 351(2), 351(3), 190 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 107 ಮತ್ತು 109 ಪ್ರಕಾರ ಪ್ರಕರಣ ದಾಖಲಾಗಿದೆ.
Mangalore Bajpe Chalo Held Without Police Permission; FIR Filed Against Organizers and Speaker at Bajpe Station.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm