ಬ್ರೇಕಿಂಗ್ ನ್ಯೂಸ್
26-05-25 07:09 pm Bangalore Correspondent ಕರಾವಳಿ
ಮಂಗಳೂರು, ಮೇ 26 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜ್ಪೆ ಪೇಟೆಯಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಆಯೋಜಿಸಿದ್ದ ಜನಾಗ್ರಹ ಸಭೆಗೆ ಪೊಲೀಸ್ ಅನುಮತಿ ಪಡೆದಿರಲಿಲ್ಲವೆಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆಯ ಶಾರದಾ ಮಂಟಪದ ಬಳಿ ಬಜ್ಪೆ ಚಲೋ ಎನ್ನುವ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಪಡೆದಿರಲಿಲ್ಲ. ಪೊಲೀಸ್ ಅನುಮತಿ ಪಡೆಯದೆ ನಡೆಸಿದ ಕಾರ್ಯಕ್ರಮದಲ್ಲಿ ಮೂರು ಸಾವಿರದಷ್ಟು ಜನರು ಪಾಲ್ಗೊಂಡಿದ್ದರು. ಕಾನೂನು ವಿರುದ್ಧವಾಗಿ ಬಜ್ಪೆ ಪೇಟೆಯಲ್ಲಿ ಜನರು ಸೇರಿದ್ದು, ಆಮೂಲಕ ಬಜ್ಪೆಗೆ ಹೋಗುವ ಮತ್ತು ಹಿಂತಿರುಗುವ ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.

ಇದಲ್ಲದೆ, ಪ್ರತಿಭಟನೆ ಸಂದರ್ಭದಲ್ಲಿ ಭಾಷಣಕಾರ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಹೇಳಿ ಜನರನ್ನು ಪ್ರಚೋದಿಸಿದ್ದು, ಇದರಿಂದ ಕೋಮು ಸೌಹಾರ್ದ ಕದಡುವ ಯತ್ನ ಮಾಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯಲ್ಲಿ ಪೊಲೀಸರು ಆಯೋಜಕರು ಮತ್ತು ಭಾಷಣಕಾರನ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ ಗಳಾದ 189(2), 191(2), 285, 192, 351(2), 351(3), 190 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 107 ಮತ್ತು 109 ಪ್ರಕಾರ ಪ್ರಕರಣ ದಾಖಲಾಗಿದೆ.
Mangalore Bajpe Chalo Held Without Police Permission; FIR Filed Against Organizers and Speaker at Bajpe Station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm