ಬ್ರೇಕಿಂಗ್ ನ್ಯೂಸ್
27-05-25 04:26 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಕುಪ್ಪೆಪದವು ಗ್ರಾಮದಲ್ಲಿ ಸ್ವಂತ ಮನೆ, ಭೂಮಿ ಇಲ್ಲದ ನೂರಾರು ಬಡ ಕುಟುಂಬಗಳು ದಶಕದಿಂದ ನಿವೇಶನಕ್ಕಾಗಿ ಪಂಚಾಯತ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದರು. ಆರು ವರ್ಷಗಳ ಹಿಂದೆ ಚುನಾವಣಾ ಪೂರ್ವದಲ್ಲಿ ಬಹಳ ತರಾತುರಿಯಿಂದ ಶಾಸಕ ಭರತ್ ಶೆಟ್ಟಿ 97 ಕುಟುಂಬಗಳಿಗೆ ನಿವೇಶನ ತೋರಿಸಿ ಹಕ್ಕು ಪತ್ರ ವಿತರಿಸಿದರು. ಆದರೆ, ಹಕ್ಕುಪತ್ರ ನೀಡಿ ಆರು ವರ್ಷ ಕಳೆದರೂ 97 ಕುಟುಂಬಳಿಗೂ ನಿವೇಶನ ಹಸ್ತಾಂತರ ಮಾಡಲಿಲ್ಲ.
ಕಾದು ಬಸವಳಿದ ಈ ಬಡ ಕುಟುಂಬಗಳು ಈಗ ಸ್ಥಳೀಯ ಕಾರ್ಮಿಕ ಸಂಘಟನೆಗಳು, ಸಿಪಿಐಎಂ ಮುಖಂಡರ ಮಾರ್ಗದರ್ಶನದಲ್ಲಿ ಹೋರಾಟ ಸಮಿತಿ ರಚಿಸಿ ಹೋರಾಟ ಶುರು ಮಾಡಿದ್ದಾರೆ. ಕಳೆದ ಜನವರಿಯಿಂದ ಧರಣಿ, ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕದ ಹಿನ್ನಲೆಯಲ್ಲಿ ಈಗ ಕುಪ್ಪೆಪದವು ಗ್ರಾಪಂ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದಾರೆ.



ಭಾರೀ ಮಳೆಯನ್ನೂ ಲೆಕ್ಕಿಸದೆ ಬಡ ನಿವೇಶನ ಸಂತ್ರಸ್ತರು ಅನಿರ್ಧಿಷ್ಟಾವಧಿ ಧರಣಿಗೆ ಚಾಲನೆ ನೀಡಿದ್ದಾರೆ. ತಾಲೂಕು ಕಾರ್ಯ ನಿರ್ವಹಣಾಧಿಕಾರಿ, ತಹಶೀಲ್ದಾರ್ ಧರಣಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದ್ದಾರೆ. ಆದಷ್ಟು ಬೇಗ ನಿವೇಶನ ವಿತರಿಸುವುದಾಗಿ ಭರವಸೆ ನೀಡಿದ್ದಾರೆ.
ರಾತ್ರಿಯೂ ಧರಣಿ ಮುಂದುವರಿಕೆ
ಕಳೆದ ಆರು ವರ್ಷಗಳಿಂದ ಭರವಸೆಗಳನ್ನಷ್ಟೆ ಕೇಳಿ ಭ್ರಮನಿರಸನ ಗೊಂಡಿರುವ ನಿವೇಶನ ರಹಿತರು ತಾಲೂಕು ಆಡಳಿತದ ಭರವಸೆಗೆ ಬಗ್ಗದೆ, ನಿವೇಶನ ಸ್ವಾಧೀನದ ಲಿಖಿತ ಪತ್ರ ನೀಡುವವರೆಗೆ ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ರಾತ್ರಿ 8 ಗಂಟೆಯ ವರೆಗೂ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ದೃಢ ನಿಲುವಿನಿಂದ ವಾಪಸ್ ಆಗಿದ್ದಾರೆ. ಮೇ 27ರ ಮಂಗಳವಾರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
Mangalore Indefinite Protest by Kuppepadavu Gram Panchayat Site Allottees Enters Second Day; No Sites Allotted Despite MLA's Assurances of Rights Certificates".
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm