ಬ್ರೇಕಿಂಗ್ ನ್ಯೂಸ್
27-05-25 10:49 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಬಂಟ್ವಾಳದಲ್ಲಿ ಬರ್ಬರವಾಗಿ ಹತ್ಯೆಯಾದ ಅಬ್ದುಲ್ ರಹೀಂ ಅವರ ಮೃತದೇಹ ಇರಿಸಲಾದ ಯೇನಪೋಯಾ ಆಸ್ಪತ್ರೆಗೆ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಭೇಟಿ ನೀಡಿದ್ದು ಈ ವೇಳೆ ಹಿಂದು ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಳ್ತಮಜಲು ಬಳಿ ಪಿಕಪ್ ಚಾಲಕನಾಗಿದ್ದ ಮುಸ್ಲಿಂ ಯುವಕನಿಗೆ ಮರಳು ಲೋಡ್ ಗೆ ಕರೆದಿದ್ದರು. ಈ ಸಂದರ್ಭ ಸಂಘ ಪರಿವಾರಕ್ಕೆ ಸೇರಿದ ಗೂಂಡಾ ಪಡೆ ಏಕಾಏಕಿ ತಲವಾರು ದಾಳಿ ನಡೆಸಿದೆ. ಘಟನೆಯಲ್ಲಿ ಇಮ್ತಿಯಾಜ್ ಆಲಿಯಾಸ್ ಅಬ್ದುಲ್ ರಹೀಂ ಸ್ಥಳದಲ್ಲೇ ಹತ್ಯೆಯಾಗಿದ್ದಾರೆ. ಕೆಲವು ದಿನಗಳಿಂದ ಕಿಡಿಗೇಡಿಗಳು ಮುಸ್ಲಿಮರಿಗೆ ಬಹಿರಂಗ ಬೆದರಿಕೆ ಹಾಕ್ತಾ ಇದ್ದಾರೆ. ರೌಡಿಶೀಟರ್ ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಬೆದರಿಕೆ ಹಾಕ್ತಾ ಇದಾರೆ. ಮೊನ್ನೆ ಪ್ರತಿಭಟನೆಯಲ್ಲಿ ಶ್ರೀಕಾಂತ್ ಶೆಟ್ಟಿ ಎಂಬಾತ ರಕ್ತಕ್ಕೆ ರಕ್ತ ಅಂತ ಹೇಳಿದ್ದಾನೆ. ಮತ್ತೊಬ್ಬ ಭರತ್ ಕುಮ್ಡೇಲ್ ಎಂಬ ಗೂಂಡಾ ಪೋಸ್ಟ್ ಮಾರ್ಟಂ ಕೂಡ ಮಾಡಲು ಆಗದ ರೀತಿಯಲ್ಲಿ ಕೊಲೆ ಮಾಡ್ತೇನೆ ಅಂದಿದ್ದಾನೆ. ಸಾಮಾಜಿಕ ತಾಣಗಳಲ್ಲಿ ಬೆದರಿಕೆ ಹಾಕಿದವರ ವಿರುದ್ದ 45 ಎಫ್ಐಆರ್ ಆಗಿದೆ. ಆದರೆ ಒಂದಿಬ್ಬರನ್ನ ಬಿಟ್ಟು ಯಾರನ್ನೂ ಬಂಧನ ಮಾಡಲಿಲ್ಲ. ಪೊಲೀಸರು ಆಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಮಾಡ್ತಾರೆ ಅಂತಿದಾರೆ, ಆದರೆ ಅದಕ್ಕೆ ಮತ್ತೊಂದು ಹೆಣ ಬೀಳಬೇಕಾ ಎಂದು ಪ್ರಶ್ನಿಸಿದರು.
15 ಮಂದಿ ಬಹಳ ವ್ಯವಸ್ಥಿತವಾಗಿ ಈ ಹತ್ಯೆ ಮಾಡಿದ್ದಾರೆ. ಇದರ ವಿರುದ್ದ ವಿಶೇಷ ತನಿಖಾ ತಂಡ ರಚಿಸಿ ತಕ್ಷಣ ತನಿಖೆ ಮಾಡಬೇಕು. ರಹೀಂ ಒಬ್ಬ ಅಮಾಯಕ ಯುವಕ, ಯಾವುದೇ ಸಂಘಟನೆಯಲ್ಲಿ ಆತ ಇರಲಿಲ್ಲ. ಆತ ಮಸೀದಿಯಲ್ಲಿ ಕಾರ್ಯದರ್ಶಿ ಆಗಿದ್ದು, ಶ್ರಮಜೀವಿಯಾಗಿದ್ದ. ಯಾವುದೇ ಕೇಸು ಆತನ ಮೇಲೆ ಇಲ್ಲ. ಸಂಘ ಪರಿವಾರದ ಗೂಂಡಾಗಳು ಅಂತಹ ಅಮಾಯಕನನ್ನ ಕೊಂದಿದ್ದಾರೆ. ಮರಳು ಲೋಡ್ ಬಾಡಿಗೆಗೆ ಕರೆಸಿ ಹತ್ಯೆ ಮಾಡಲಾಗಿದೆ.
ಈ ಹಿಂದೆ ಯಾವುದೇ ಸಂಘಟನೆಯಲ್ಲಿ ಇಲ್ಲದ ಫಾಜಿಲ್ ಹತ್ಯೆ ಮಾಡಿದ್ದರು. ಇವರಿಗೆ ಒಬ್ಬ ಮುಸಲ್ಮಾನನ ರಕ್ತ ಬೇಕು, ಯಾವುದೇ ಸಂಘಟನೆಯಲ್ಲಿ ಇರಬೇಕು ಅಂತ ಇಲ್ಲ. ಬಜಪೆಯಲ್ಲಿ ಶ್ರೀಕಾಂತ್ ಶೆಟ್ಟಿ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದ. ಪೊಲೀಸರ ಗಮನಕ್ಕೆ ತಂದರೂ ಎಫ್ ಐಆರ್ ಮಾಡಿದ್ದು ಬಿಟ್ಟರೆ ಕ್ರಮ ಆಗಿಲ್ಲ. ಸಂಘ ಪರಿವಾರದವರು ಓಪನ್ ಹೇಳಿಕೆ ಕೊಟ್ಟರೂ ಕ್ರಮ ಆಗ್ತಿಲ್ಲ. ಇಲ್ಲಿನ ಬಿಜೆಪಿ ಶಾಸಕರು ಕೂಡ ಬಹಿರಂಗ ಹೇಳಿಕೆ ಕೊಡ್ತಾ ಇದ್ದಾರೆ. ಸರ್ಕಾರ ತಕ್ಷಣ ಕೊಲೆಯ ಹಿಂದಿರೋ ಎಲ್ಲರನ್ನೂ ಹುಡುಕಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
Mangalore SDPI District President Anwar Sadat Visits Yenepoya Hospital, Condemns Hindu Organizations after Brutal Murder in Bantwal.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm