ಬ್ರೇಕಿಂಗ್ ನ್ಯೂಸ್
28-05-25 03:49 pm Mangalore Correspondent ಕರಾವಳಿ
ಮಂಗಳೂರು, ಮೇ 28 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳತ್ತಮಜಲು ಗ್ರಾಮದಲ್ಲಿ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಅಬ್ದುಲ್ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.
ಬಿಜೆಪಿ ಶವಗಳ ಮೇಲೆ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ ಸಚಿವರು, ಪ್ರಚೋದನಕಾರಿ ಭಾಷಣಗಳನ್ನ ಮಾಡಿ ಸಮಾಜದಲ್ಲಿ ಕೋಮು ದ್ವೇಷವನ್ನ ಮೂಡಿಸಲಾಗುತ್ತಿದೆ. ಹತ್ಯೆ ಮಾಡುವ ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ. ಮಂಗಳೂರಿನಲ್ಲಿ ನಡೆದ ಹತ್ಯೆಗಳ ವಿಚಾರದಲ್ಲಿ ನಮ್ಮ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಂಡಿದೆ. ಯಾವುದೇ ಭೇದ ಭಾವ ಮಾಡಿಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿದ್ದರೂ, ಅವರ ಹೆಡಿಮುರಿ ಕಟ್ಟಿ, ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಅಮಾಯಕ ಅಶ್ರಫ್ ಹತ್ಯೆ ಮಾಡಿದವರನ್ನು ಹಿಡಿದು ಬಂಧಿಸಲಾಗಿದೆ. ರೌಡಿಶಿಟರ್ ಸುಹಾಸ್ ಶೆಟ್ಟಿ ಹತ್ಯೆ ಮಾಡಿದವರನ್ನೂ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇದೀಗ ಅಬ್ದುಲ್ ಅವರ ಪ್ರಕರಣದಲ್ಲೂ ಆರೋಪಿಗಳನ್ನ ಹಿಡಿದು ತರುವಲ್ಲಿ ಪೊಲೀಸರು ಸಕ್ಷಮರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕರಾವಳಿ ಭಾಗದಲ್ಲಿ ಈ ರೀತಿಯ ಪ್ರತೀಕಾರದ ಹತ್ಯೆಗಳನ್ನ ತಡೆಗಟ್ಟಲು ಕೋಮು ನಿಗ್ರಹ ದಳ ರಚಿಸಲಾಗುತ್ತಿದೆ. ಶೀಘ್ರದಲ್ಲಿಯೇ ಆ್ಯಂಟಿ ಕಮ್ಯುನಲ್ ಫೋರ್ಸ್ ತನ್ನ ಕಾರ್ಯ ಪ್ರಾರಂಭಿಸಲಿದೆ. ಕೋಮುವಾದದಿಂದ ಸಮಾಜಗಳಲ್ಲಿ ಮೂಡುತ್ತಿರುವ ಒಡಕನ್ನು ಹೋಗಲಾಡಿಸಿ ಸೌಹಾರ್ದಯುತ, ಸಹಬಾಳ್ವೆಯ ಶಾಂತಿಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Mangalore Strict Action Against Murderers of Rahiman in bantwal, No Room for Discrimination Based on Caste or Religion says minister Dinesh Gundurao
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm