ಬ್ರೇಕಿಂಗ್ ನ್ಯೂಸ್
31-05-25 11:14 pm Mangalore Correspondent ಕರಾವಳಿ
ಮಂಗಳೂರು, ಮೇ 31 : ಕೋಮು ವೈಷಮ್ಯದ ಕೊಲೆಗೆ ಪ್ರಚೋದನಕಾರಿ ಭಾಷಣವೇ ಕಾರಣ. ಅಂಥ ಭಾಷಣ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಸ್ಲಿಂ ಮುಖಂಡರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಆಗಮಿಸಿದ್ದ ಸಚಿವರನ್ನು ಭೇಟಿಯಾಗಿ ನಾಯಕರು ಮನವಿ ಸಲ್ಲಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ಮುಖಂಡ ಜಿಎ ಬಾವಾ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ಬೇಕು. ನಮ್ಮ ಮಕ್ಕಳು ಇಂಥ ಸ್ಥಿತಿಯಲ್ಲಿ ಬದುಕುವಂತೆ ಆಗಬಾರದು. ಯಾವುದೇ ಧರ್ಮ, ಜಾತಿ ಇರಲಿ, ಹಿಂದು- ಮುಸ್ಲಿಂ ಯಾರಿದ್ದರೂ ದ್ವೇಷದ ಭಾಷಣ ಮಾಡಿದರೆ ಕಠಿಣ ಕ್ರಮ ಜರುಗಿಸಿ. ಈ ರೀತಿಯ ಕೊಲೆ ಮುಂದೆ ಯಾವತ್ತೂ ಆಗದಂತೆ ಕಠಿಣ ಕ್ರಮ ಆಗಬೇಕಾಗಿದೆ. ನಮಗೆ ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸ ಇದೆ, ಹಾಗಾಗಿ ಮನವಿ ಕೊಟ್ಟಿದ್ದೇವೆ. ಪೊಲೀಸ್ ಇಲಾಖೆಯಲ್ಲೂ ಅಮೂಲಾಗ್ರ ಬದಲಾವಣೆ ಆಗಬೇಕೆಂದು ಬೇಡಿಕೆ ಇಟ್ಟಿದ್ದೇವೆ ಎಂದರು.
ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ಕೋಮು ದ್ವೇಷದ ಕೊಲೆಗಳು ಯಾವತ್ತೂ ಆಗಬಾರದು. ಮುಸ್ಲಿಮರು ಶಾಂತಿ ಪ್ರಿಯರು. ಯಾರನ್ನೂ ಹಿಂಸಿಸುವ ಪ್ರವೃತ್ತಿ ನಮ್ಮಲ್ಲಿ ಇಲ್ಲ. ಆದರೆ ಇಂಥ ಸ್ಥಿತಿ ಬರುವುದಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಕೆಲವು ಪೊಲೀಸ್ ಠಾಣೆಗಳಲ್ಲಿ 10-15 ವರ್ಷಗಳಿಂದ ಠಿಕಾಣಿ ಹೂಡಿದವರು ಇದ್ದಾರೆ. ಅವರನ್ನು ಬೇರೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಹೆಡ್ ಕಾನ್ಸ್ ಟೇಬಲ್ ಆಗಿದ್ದವರು ರಾಜಕೀಯ ಬಲದಿಂದ ಎಸಿಪಿ ಅಧಿಕಾರಿಗೆ ಬೆದರಿಕೆ ಹಾಕುವ ಸ್ಥಿತಿಯಿದೆ. ಇದಕ್ಕೆಲ್ಲ ಕೊನೆ ಹಾಕಬೇಕು, ಹೊಸ ಅಧಿಕಾರಿ ಬಂದಿದ್ದಾರೆ. ನಮಗೆಲ್ಲ ವಿಶ್ವಾಸ ಇದೆ ಎಂದು ಹೇಳಿದರು.
ಕಾನೂನು ಬಿಗಿ ಮಾಡುತ್ತೇವೆ ; ಸಚಿವ
ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರು, ರಾಜಕೀಯ ಮುಖಂಡರು ಕೂಡ ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ಮಾಡುತ್ತಾರೆ. ಪೊಲೀಸರು ಎಫ್ಐಆರ್ ಮಾಡಿದ್ರೂ ಬೇಲ್ ಮೇಲೆ ಬರುತ್ತಾರೆ. ಇಂಥದ್ದಕ್ಕೆ ಕಡಿವಾಣ ಹಾಕಬೇಕಾಗಿದೆ. ಕಾನೂನು ಬಿಗಿಗೊಳಿಸಲು ತಜ್ಞರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡುತ್ತೇನೆ. ಈಗ ಇರುವ ಕಾನೂನಿನಲ್ಲಿ ಸ್ಪಷ್ಟತೆ ಇಲ್ಲದ್ದರಿಂದ ಈ ರೀತಿಯಾಗಿದೆ. ಮೂರು ಜಿಲ್ಲೆಗೆ ಕಾರ್ಯಪಡೆ ರಚನೆ ಮಾಡಲಾಗಿದೆ. ಇಲಾಖೆಯಲ್ಲಿ ಒಳ್ಳೆಯ ಹೆಸರಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಫುಲ್ ಪವರ್ ನೀಡಿದ್ದೇವೆ ಎಂದು ಹೇಳಿದ್ದಾರೆ.
Dakshina Kannada district in-charge Dinesh Gundu Rao on Saturday addressed a press conference at the Mangaluru police commissioner’s office, emphasizing the need for strict law enforcement and lasting peace in the region, which has witnessed recent communal disturbances.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am