ಬ್ರೇಕಿಂಗ್ ನ್ಯೂಸ್
01-06-25 12:32 pm Mangalore Correspondent ಕರಾವಳಿ
ಮಂಗಳೂರು, ಜೂ 1: ಕೋಮು ವೈಷಮ್ಯದ ಕೊಲೆಗೆ ಪ್ರಚೋದನಕಾರಿ ಭಾಷಣವೇ ಕಾರಣ. ಅಂಥ ಭಾಷಣ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಸ್ಲಿಂ ಮುಖಂಡರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಆಗಮಿಸಿದ್ದ ಸಚಿವರನ್ನು ಭೇಟಿಯಾಗಿ ನಾಯಕರು ಮನವಿ ಸಲ್ಲಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ಮುಖಂಡ ಜಿಎ ಬಾವಾ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ಬೇಕು. ನಮ್ಮ ಮಕ್ಕಳು ಇಂಥ ಸ್ಥಿತಿಯಲ್ಲಿ ಬದುಕುವಂತೆ ಆಗಬಾರದು. ಯಾವುದೇ ಧರ್ಮ, ಜಾತಿ ಇರಲಿ, ಹಿಂದು- ಮುಸ್ಲಿಂ ಯಾರಿದ್ದರೂ ದ್ವೇಷದ ಭಾಷಣ ಮಾಡಿದರೆ ಕಠಿಣ ಕ್ರಮ ಜರುಗಿಸಿ. ಈ ರೀತಿಯ ಕೊಲೆ ಮುಂದೆ ಯಾವತ್ತೂ ಆಗದಂತೆ ಕಠಿಣ ಕ್ರಮ ಆಗಬೇಕಾಗಿದೆ. ನಮಗೆ ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸ ಇದೆ, ಹಾಗಾಗಿ ಮನವಿ ಕೊಟ್ಟಿದ್ದೇವೆ. ಪೊಲೀಸ್ ಇಲಾಖೆಯಲ್ಲೂ ಅಮೂಲಾಗ್ರ ಬದಲಾವಣೆ ಆಗಬೇಕೆಂದು ಬೇಡಿಕೆ ಇಟ್ಟಿದ್ದೇವೆ ಎಂದರು.



ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ಕೋಮು ದ್ವೇಷದ ಕೊಲೆಗಳು ಯಾವತ್ತೂ ಆಗಬಾರದು. ಮುಸ್ಲಿಮರು ಶಾಂತಿ ಪ್ರಿಯರು. ಯಾರನ್ನೂ ಹಿಂಸಿಸುವ ಪ್ರವೃತ್ತಿ ನಮ್ಮಲ್ಲಿ ಇಲ್ಲ. ಆದರೆ ಇಂಥ ಸ್ಥಿತಿ ಬರುವುದಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಕೆಲವು ಪೊಲೀಸ್ ಠಾಣೆಗಳಲ್ಲಿ 10-15 ವರ್ಷಗಳಿಂದ ಠಿಕಾಣಿ ಹೂಡಿದವರು ಇದ್ದಾರೆ. ಅವರನ್ನು ಬೇರೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಹೆಡ್ ಕಾನ್ಸ್ ಟೇಬಲ್ ಆಗಿದ್ದವರು ರಾಜಕೀಯ ಬಲದಿಂದ ಎಸಿಪಿ ಅಧಿಕಾರಿಗೆ ಬೆದರಿಕೆ ಹಾಕುವ ಸ್ಥಿತಿಯಿದೆ. ಇದಕ್ಕೆಲ್ಲ ಕೊನೆ ಹಾಕಬೇಕು, ಹೊಸ ಅಧಿಕಾರಿ ಬಂದಿದ್ದಾರೆ. ನಮಗೆಲ್ಲ ವಿಶ್ವಾಸ ಇದೆ ಎಂದು ಹೇಳಿದರು.
ಕಾನೂನು ಬಿಗಿ ಮಾಡುತ್ತೇವೆ ; ಸಚಿವ
ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರು, ರಾಜಕೀಯ ಮುಖಂಡರು ಕೂಡ ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ಮಾಡುತ್ತಾರೆ. ಪೊಲೀಸರು ಎಫ್ಐಆರ್ ಮಾಡಿದ್ರೂ ಬೇಲ್ ಮೇಲೆ ಬರುತ್ತಾರೆ. ಇಂಥದ್ದಕ್ಕೆ ಕಡಿವಾಣ ಹಾಕಬೇಕಾಗಿದೆ. ಕಾನೂನು ಬಿಗಿಗೊಳಿಸಲು ತಜ್ಞರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡುತ್ತೇನೆ. ಈಗ ಇರುವ ಕಾನೂನಿನಲ್ಲಿ ಸ್ಪಷ್ಟತೆ ಇಲ್ಲದ್ದರಿಂದ ಈ ರೀತಿಯಾಗಿದೆ. ಮೂರು ಜಿಲ್ಲೆಗೆ ಕಾರ್ಯಪಡೆ ರಚನೆ ಮಾಡಲಾಗಿದೆ. ಇಲಾಖೆಯಲ್ಲಿ ಒಳ್ಳೆಯ ಹೆಸರಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಫುಲ್ ಪವರ್ ನೀಡಿದ್ದೇವೆ ಎಂದು ಹೇಳಿದ್ದಾರೆ.
Mangalore Amid rising tensions following a recent communal murder, Muslim leaders met Karnataka Minister Dinesh Gundu Rao, urging strict action against those delivering provocative speeches. They also demanded major reforms in the police department. Leaders expressed concern over long-standing police postings and political interference, calling for transfers and stricter accountability. Senior leaders like G.A. Bava and Ibrahim Kodijal emphasized the need for peace and justice, placing trust in CM Siddaramaiah.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm