ಬ್ರೇಕಿಂಗ್ ನ್ಯೂಸ್
02-06-25 09:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 2 : ಕೋಮು ದ್ವೇಷದ ಕೊಲೆ ಸರಣಿ ಮತ್ತು ಈ ರೀತಿಯ ವಾತಾವರಣ ಮುಂದೆಂದೂ ಆಗಕೂಡದು ಎಂದು ಟಾಸ್ಕ್ ಪಡೆದು ಬಂದಿರುವ ಎಸ್ಪಿ ಡಾ.ಅರುಣ್ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ರೌಡಿ ಹಿನ್ನೆಲೆಯಿರುವ ವ್ಯಕ್ತಿಗಳು, ಸೌಜನ್ಯಾ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಪ್ರಬಲ ಹಿಂದುತ್ವ ಹೋರಾಟಗಾರ ಅರುಣ್ ಪುತ್ತಿಲ ಸೇರಿದಂತೆ ಬಂಟ್ವಾಳ, ಪುತ್ತೂರು ವ್ಯಾಪ್ತಿಯ 36 ಮಂದಿಯನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ಕೈಗೊಂಡಿದ್ದಾರೆ.
ಹಾಲಿ ಬಿಜೆಪಿ ಮುಖಂಡರೂ, ಕಳೆದ ಬಾರಿ ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡೆದ್ದು ಗೆಲುವಿನ ಸನಿಹ ಬಂದು ಚಿಲ್ಲರೆ ಮತಗಳಿಂದ ಸೋಲು ಕಂಡಿದ್ದ ಅರುಣ್ ಪುತ್ತಿಲ ಅವರಿಗೆ ಗಡೀಪಾರು ಬಗ್ಗೆ ನೋಟಿಸ್ ನೀಡಲಾಗಿದ್ದು ಜೂನ್ 6ರಂದು ವಿಚಾರಣೆ ಹಾಜರಾಗಲು ಸೂಚಿಸಲಾಗಿದೆ. ಇದರ ಬೆನ್ನಲ್ಲೇ ಪೊಲೀಸ್ ಇಲಾಖೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ, ಬೆಳ್ಳಾರೆ ವಿಟ್ಲ ಠಾಣೆ ವ್ಯಾಪ್ತಿಯ ರೌಡಿ ಲಿಸ್ಟ್ ಹೊಂದಿರುವ ಹಿಂದು ಮತ್ತು ಮುಸ್ಲಿಂ ಸಂಘಟನೆ ಕಾರ್ಯಕರ್ತರು, ಬಿಜೆಪಿಯಲ್ಲಿ ಗುರುತಿಸಿಕೊಂಡವರ ಪಟ್ಟಿ ರೆಡಿ ಮಾಡಿದ್ದು ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದೆ. ಈ ಪಟ್ಟಿಯಲ್ಲಿ ಒಟ್ಟು 36 ಮಂದಿ ಇದ್ದರೆ, ಈ ಪೈಕಿ 13 ಮುಸ್ಲಿಮರಿದ್ದಾರೆ.

ಪಟ್ಟಿಯಲ್ಲಿ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಹೆಸರು ಮಾತ್ರ ಇದೆ. ಉಳಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯ ಭರತ್ ಕುಮ್ಡೇಲು, ಭುವಿತ್ ಶೆಟ್ಟಿ ಸೇರಿ ಹಲವರ ಹೆಸರಿದೆ. ಎಲ್ಲರಿಗೂ ಆರಂಭದಲ್ಲಿ ನೋಟಿಸ್ ನೀಡಲಾಗುತ್ತಿದ್ದು ಅಭಿಪ್ರಾಯ ಪಡೆದು ಸೂಕ್ತ ಸ್ಪಂದನೆ ಸಿಗದಿದ್ದಲ್ಲಿ ಗಡೀಪಾರು ಮಾಡಲಿದ್ದಾರೆ.
ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಅಂದರೆ, ಎಸ್ಪಿ ನಿಯಂತ್ರಣಕ್ಕೆ ಬರುವ ಠಾಣೆಗಳ ವ್ಯಾಪ್ತಿಯ 36 ಮಂದಿಯನ್ನು ಗಡೀಪಾರು ಮಾಡಲು ಇಲಾಖೆ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಸೌಜನ್ಯಾ ಹೋರಾಟ ಮಾತ್ರ ಗುರಿ ಇರಿಸಿಕೊಂಡ ಮಹೇಶ್ ಶೆಟ್ಟಿ ತಿಮರೋಡಿ, ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡಲು ಮುಂದಾಗಿದ್ದು ವಿಶೇಷ.
In a strong crackdown on communal unrest and repeat offenders, Dakshina Kannada police have initiated action to extern 36 individuals from the district, including prominent Hindutva activists Mahesh Shetty Timarodi, Arun Puthila, and Bharat Kumdelu. Superintendent of Police Dr. Arun and Mangaluru Commissioner Sudhir Kumar Reddy are spearheading the operation, targeting individuals with criminal backgrounds and those allegedly inciting communal tensions. Notices have been issued, including one to Arun Puthila—former BJP rebel candidate—summoning him for a hearing on June 6.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm