ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm