ಬ್ರೇಕಿಂಗ್ ನ್ಯೂಸ್
03-06-25 07:37 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಸ್ಸೆಸ್ ಮತ್ತು ಸಂಘ ಪರಿವಾರದ ಪ್ರಮುಖರ ಮನೆಗಳಿಗೆ ನಡುರಾತ್ರಿಯಲ್ಲಿ ಪೊಲೀಸರು ಎಂಟ್ರಿ ಕೊಟ್ಟು ಜನಸಾಮಾನ್ಯರ ಖಾಸಗಿತನಕ್ಕೆ ಧಕ್ಕೆ ಮಾಡುತ್ತಿದ್ದಾರೆ, ಇದು ಸಂವಿಧಾನದ ಮೂಲಭೂತ ಹಕ್ಕಿನ ಉಲ್ಲಂಘನೆಯೆಂದು ಖ್ಯಾತ ವಕೀಲ ಗಿರೀಶ್ ಭಾರದ್ವಾಜ್ ಅವರು ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರಿಗೆ ದೂರು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಪೊಲೀಸ್ ವರಿಷ್ಠರ ಸೂಚನೆಯಂತೆ ಸಮಾಜದ ಗಣ್ಯರು, ಸಾಮಾಜಿಕ ಕಾರ್ಯಕರ್ತರು ಮತ್ತು ಆರೆಸ್ಸೆಸ್ ಪ್ರಮುಖರ ಮನೆಗಳಿಗೆ ಪೊಲೀಸರು ರಾತ್ರಿ 11 ಗಂಟೆ ಬಳಿಕ ಭೇಟಿ ಕೊಟ್ಟು ಫೋಟೋ ತೆಗೆಯುವುದು, ಜಿಪಿಎಸ್ ಲೊಕೇಶನ್ ಶೇರ್ ಮಾಡುವುದನ್ನು ಮಾಡುತ್ತಿದ್ದಾರೆ. ಇದು ಪೂರ್ತಿಯಾಗಿ ವ್ಯಕ್ತಿಯ ಖಾಸಗಿತನ ಮತ್ತು ಬದುಕುವ ಹಕ್ಕಿನ ವಿರುದ್ಧವಾಗಿದೆ. ಈ ರೀತಿಯ ನಡೆ ಸಂವಿಧಾನದ ಕಲಂ 14, 17, 19 ಮತ್ತು 21ರ ಪ್ರಕಾರ ಕಾನೂನು ವಿರೋಧಿಯಾಗುತ್ತದೆ.

ಪೊಲೀಸರು ರಾತ್ರಿ ವೇಳೆ ಏಕಾಏಕಿ ಒಬ್ಬರ ಮನೆಗೆ ಭೇಟಿ ಕೊಡುವುದು ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ತರುವುದು ಮಾತ್ರವಲ್ಲದೆ, ಸಮಾಜದಲ್ಲಿ ಆತನ ಮರ್ಯಾದೆಗೆ ಕುಂದು ತರುತ್ತದೆ ಮತ್ತು ಮಾನಸಿಕ ಅಶಾಂತಿಗೂ ಕಾರಣವಾಗುತ್ತದೆ. ಇವೆರಡೂ ಸಂವಿಧಾನದಲ್ಲಿ ವ್ಯಕ್ತಿಗೆ ಕೊಡಲಾಗಿರುವ ಮೂಲಭೂತ ಹಕ್ಕಾಗಿರುತ್ತದೆ. ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ತನ್ನ ನಡೆಯನ್ನು ಸಮರ್ಥಿಸಿಕೊಂಡು ಕೋಮುವಾದಿ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಮುಂದುವರಿಯುತ್ತದೆ ಮತ್ತು ಇವರ ಪರವಾಗಿ ಧ್ವನಿ ಎತ್ತುವವರೆಲ್ಲರ ಮೇಲೂ ಕೇಸು ಹಾಕಲಾಗುತ್ತದೆ ಎಂದಿದ್ದಾರೆ.
ಒಬ್ಬ ಎಸ್ಪಿ ಯಾವುದೇ ಸಂಘಟನೆಯನ್ನು ಕೋಮುವಾದಿ ಎನ್ನುವುದಕ್ಕಾಗಲೀ, ನ್ಯಾಯಾಂಗದ ರೀತಿ ವರ್ತಿಸುವುದಕ್ಕಾಗಲೀ ಅಧಿಕಾರ ಹೊಂದಿರುವುದಿಲ್ಲ. ಎಸ್ಪಿಯಾದವರು ಈ ರೀತಿ ಹೇಳುವುದು ಸಂವಿಧಾನ ವಿರೋಧಿ ಮಾತ್ರವಲ್ಲದೆ, ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಬೆದರಿಕೆಯೂ ಆಗಿರುತ್ತದೆ. ಹೀಗಾಗಿ ಪೊಲೀಸ್ ದೂರು ಪ್ರಾಧಿಕಾರವು ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ, ರಾತ್ರಿ ವೇಳೆ ಯಾವುದೇ ಅಪರಾಧ ಹಿನ್ನೆಲೆಯಿರದ ವ್ಯಕ್ತಿಗಳ ಮನೆಗಳಿಗೆ ಹೋಗುವುದನ್ನು ನಿರ್ಬಂಧಿಸಬೇಕು. ಅಲ್ಲದೆ, ಕಳೆದ ಏಳು ದಿನಗಳಲ್ಲಿ ಎಸ್ಪಿ ಕೈಗೊಂಡ ಕ್ರಮಗಳು, ರಾತ್ರಿ ವೇಳೆ ಮನೆಗಳಿಗೆ ಪೊಲೀಸರನ್ನು ಕಳಿಸಿಕೊಟ್ಟ ಔಚಿತ್ಯದ ಬಗ್ಗೆ ವರದಿ ಪಡೆಯಬೇಕು. ಅಲ್ಲದೆ, ಆಗಿರುವ ಕಾನೂನು ಉಲ್ಲಂಘನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಯನ್ನೂ ನಡೆಸುವುದಕ್ಕೆ ಆದೇಶ ನೀಡಬೇಕು ಮತ್ತು ಪೊಲೀಸ್ ಪವರ್ ದುರುಪಯೋಗ ಆಗುವುದನ್ನು ತಪ್ಪಿಸಬೇಕು ಎಂದು ವಕೀಲ ಗಿರೀಶ್ ಭಾರದ್ವಾಜ್ ದೂರು ಪತ್ರದಲ್ಲಿ ಕೇಳಿಕೊಂಡಿದ್ದಾರೆ.
ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಬರೆದ ಪತ್ರವನ್ನು ರಾಷ್ಟ್ರೀಯ ಮಾನವ ಹಕ್ಕು ಆಯೋಗ, ರಾಜ್ಯ ಮಾನವ ಹಕ್ಕು ಆಯೋಗ, ಕರ್ನಾಟಕ ಡಿಜಿಪಿ ಅವರಿಗೂ ಕಳುಹಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ಗಮನ ಸೆಳೆಯಲಾಗಿದೆ. ವಕೀಲ ಗಿರೀಶ್ ಭಾರದ್ವಾಜ್ ಅವರು, ಇತ್ತೀಚೆಗೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ರಾಜ್ಯ ಸರಕಾರ ಆರೋಪಿಗಳ ಮೇಲಿನ ಕೇಸನ್ನು ಹಿಂಪಡೆದಿರುವುದನ್ನು ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿ ಸರ್ಕಾರದ ನಡೆಯ ವಿರುದ್ಧ ತಡೆ ತಂದಿದ್ದರು. ಅಲ್ಲದೆ, ಸರ್ಕಾರಕ್ಕೂ ಛೀಮಾರಿ ಹಾಕುವಂತೆ ಮಾಡಿ ಗಮನಸೆಳೆದಿದ್ದರು.
ವಕೀಲ ಭಾರದ್ವಾಜ್ ಬರೆದ ರೀತಿಯಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಬೆಂಗಳೂರಿನ ಪೊಲೀಸ್ ದೂರು ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ಎಸ್ಪಿಯವರು ಕೈಗೊಂಡ ಕ್ರಮಗಳು ವ್ಯಕ್ತಿಯ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದಾರೆ.
Mangalore Police Night Visits Violate Right to Privacy, Complaint Filed Against Dakshina Kannada SP to National Human Rights Commission.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm