ಬ್ರೇಕಿಂಗ್ ನ್ಯೂಸ್
04-06-25 09:34 pm Mangalore Correspondent ಕರಾವಳಿ
ಮಂಗಳೂರು, ಜೂನ್ 4 : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹಾಕಿ, ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡಲು ಪ್ರಯತ್ನಿಸಿದ ಆರೋಪಿಗಳ ಪತ್ತೆಗಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದು, ಪ್ರಕರಣಗಳನ್ನು ದಾಖಲಿಸಿ ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ.
ಸೌದಿ ಅರೇಬಿಯಾದಿಂದ team_jokerzzz._ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದ ಆರೋಪಿ ಹೆಜಮಾಡಿ ನಿವಾಸಿ ಮೊಹಮ್ಮದ್ ಅಸ್ಲಾಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ಬಳಸಿಕೊಂಡು team_karna_surathkal ಎಂಬ Instagram ಪೇಜ್ ತೆರೆದಿದ್ದು, ಸದ್ರಿ ಪೇಜ್ ನಲ್ಲಿ ಚೆನ್ನಪ್ಪ @ ಮುತ್ತು ಸುರತ್ಕಲ್ ಎಂಬಾತನು ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ ಆರೋಪದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ರಿ ಪ್ರಕರಣದಲ್ಲಿ ಸುರತ್ಕಲ್ ಇಡ್ಯಾ ಗ್ರಾಮದ ಚೇತನ್ ಬಂಗೇರ(20) ಮತ್ತು ಹಳೆಯಂಗಡಿ ಚೇಳ್ಯಾರು ನಿವಾಸಿ ನಿತಿನ್ ಅಡಪ(23) ಎಂಬವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿದ್ದಾರೆ.
ಸೌದಿ ಅರೇಬಿಯಾದಿಂದ Beary_royal_nawab ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ, ಆಧಾರದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ. 353 (2) ಭಾರತೀಯ ನ್ಯಾಯ ಸಂಹಿತೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 42/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಫರಂಗಿಪೇಟೆಯ ರಿಯಾಝ್ ಇ್ರಬಾಹಿಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ.
Troll_bengare_ro_makka ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಕುಳೂರು ಕಸಬಾ ಬೆಂಗ್ರೆಯ ಜಮಾಲ್ ಝಾಕೀರ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.
Facebook ಖಾತೆಯ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 53/2025 ಕಲಂ.196(1),(A),353(2),79,56 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ, ಸದ್ರಿ ಗುರು ಪ್ರಸಾದ್ ಹಳೆಯಂಗಡಿ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ಸದ್ರಿ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ವಿಶೇಷ ತಂಡಗಳಿಂದ ಮುಂದುವರೆಸಲಾಗಿದೆ.
Communal Provocative Posts on Social Media, Special Police Teams Nab Six in Mangalore Crackdown.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm