ಬ್ರೇಕಿಂಗ್ ನ್ಯೂಸ್
04-06-25 10:43 pm Mangalore Correspondent ಕರಾವಳಿ
ಉಳ್ಳಾಲ, ಜೂ.4 : ಮೊನ್ನೆಯಷ್ಟೇ ಉಳ್ಳಾಲ ತಾಲೂಕಿನಾದ್ಯಂತ ಗರಿಷ್ಠ ಪ್ರಮಾಣದಲ್ಲಿ ಸುರಿದಿದ್ದ ಮಳೆಯಿಂದಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಅಂಬಿಕಾ ರೋಡ್ ಮೂರನೇ ಅಡ್ಡ ರಸ್ತೆಯ ರಾಜಕಾಲುವೆ ಉಕ್ಕಿ ಹರಿದ ಪರಿಣಾಮ ಸ್ಥಳೀಯ ಮನೆಗಳು ಪ್ರವಾಹದಿಂದ ಮುಳುಗಡೆಯಾಗಿದ್ದವು. ಬುಧವಾರ ಸಂಜೆ ರಾಜಕಾಲುವೆಯ ಕಿರು ಸೇತುವೆಯ ಅಡಿಭಾಗ ಕುಸಿದಿದ್ದು ಸೇತುವೆ ಕುಸಿದು ಬೀಳಲು ಕ್ಷಣಗಣನೆ ಆರಂಭವಾಗಿದೆ. ಸುರಕ್ಷತೆ ದೃಷ್ಟಿಯಿಂದ ಸೇತುವೆ ಸಂಚಾರವನ್ನ ಸೋಮೇಶ್ವರ ಪುರಸಭಾ ಅಧಿಕಾರಿಗಳು ನಿಷೇಧಗೊಳಿಸಿದ್ದು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನ ಸುಮಾರು ಎಪ್ಪತ್ತು ಮನೆಗಳ ಸಂಪರ್ಕ ಕಡಿತವಾಗಿ ನಿವಾಸಿಗಳು ಮನೆ ತಲುಪಲು ಬವಣೆ ಪಡುವಂತಾಗಿದೆ.
ಅಂಬಿಕಾರೋಡ್ ಮೂರನೇ ಅಡ್ಡ ರಸ್ತೆಯ ರಾಜ ಕಾಲುವೆಯ ಕಿರು ಸೇತುವೆ ಹಳೆಯದಾಗಿದ್ದು ಕಳೆದ ನಾಲ್ಕು ವರ್ಷದ ಹಿಂದಷ್ಟೆ ಸೋಮೇಶ್ವರ ಪುರಸಭೆ ಆಡಳಿತವು ಸೇತುವೆಯ ದುರಸ್ತಿ ಕಾರ್ಯ ನಡೆಸಿತ್ತು. ಸೇತುವೆಯ ಕಳಪೆ ದುರಸ್ತಿಯಿಂದಾಗಿ ಕಳೆದ ಗುರುವಾರ ಸುರಿದ ಭಾರೀ ಮಳೆಗೆ ಕಾಲುವೆಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಅಡಿಭಾಗವು ಕುಸಿತಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು ಕೆಲವರು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ರಾಜಕಾಲುವೆಯ ಕಿರು ಸೇತುವೆಯ ಮೇಲೆ ದಿನ ನಿತ್ಯಲೂ ಕಲ್ಲು , ಮರಳು ಇತರ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಘನ ವಾಹನಗಳು ಚಲಿಸುತ್ತಿದ್ದ ಪರಿಣಾಮ ಹಳೆ ಸೇತುವೆ ಶಿಥಿಲಗೊಂಡು ಕುಸಿದಿರೋದಾಗಿ ಆರೋಪಿಸಿದ್ದಾರೆ.





ಮತ್ತೆ ಧಾರಾಕಾರವಾಗಿ ಮಳೆ ಸುರಿದರೆ ಸೇತುವೆ ಸಂಪೂರ್ಣ ಕುಸಿದು ಬಿದ್ದು ರಾಜ ಕಾಲುವೆಯಲ್ಲಿ ಹರಿಯುವ ಭಾರೀ ಪ್ರಮಾಣದ ನೀರು ಸ್ಥಳೀಯ ಅನೇಕ ಮನೆಗಳಿಗೆ ನುಗ್ಗಿ ಮತ್ತೆ ಅವಾಂತರ ಸೃಷ್ಟಿಸುವ ಭೀತಿ ಎದುರಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಮತ್ತು ಪ್ರಬಂಧಕರಾದ ಕೃಷ್ಣ, ಸ್ಥಳೀಯ ಪುರಸಭೆ ಸದಸ್ಯರಾದ ಪರ್ವೀನ್ ಅವರು ಭೇಟಿ ನೀಡಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ. ಸದ್ಯಕ್ಕೆ ಕುಸಿದಿರುವ ಸೇತುವೆ ಬೀಳದಂತೆ ತಡೆಯುವುದೇ ಅಧಿಕಾರಿಗಳಿಗೆ ಸವಾಲಾಗಿದೆ.
ಅತ್ತ ಕುಂಪಲ ಮುಖ್ಯ ರಸ್ತೆಯಲ್ಲಿ ಪೈಪ್ ಲೈನ್ ಕಾಮಗಾರಿಯಿಂದ ಕೆಟ್ಟು ಹೋಗಿದ್ದು, ದುರಸ್ತಿ ಕಾಮಗಾರಿಗೆಂದು ಅಲ್ಲಿನ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ. ಕುಂಪಲ ಪ್ರದೇಶಕ್ಕೆ ತೆರಳುವವರೂ ಕೂಡ ಅಂಬಿಕಾ ರೋಡಿನ ಮೂರನೇ ಅಡ್ಡ ರಸ್ತೆಯನ್ನೇ ಪರ್ಯಾಯವಾಗಿ ನೆಚ್ಚಿಕೊಂಡಿದ್ದರು.
Mangalore Cracks in Someshwara Ambika Road Culvert Raise Flood Fears; Bridge Closed, 70 Homes Cut Off.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm