ಬ್ರೇಕಿಂಗ್ ನ್ಯೂಸ್
04-06-25 10:43 pm Mangalore Correspondent ಕರಾವಳಿ
ಉಳ್ಳಾಲ, ಜೂ.4 : ಮೊನ್ನೆಯಷ್ಟೇ ಉಳ್ಳಾಲ ತಾಲೂಕಿನಾದ್ಯಂತ ಗರಿಷ್ಠ ಪ್ರಮಾಣದಲ್ಲಿ ಸುರಿದಿದ್ದ ಮಳೆಯಿಂದಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಅಂಬಿಕಾ ರೋಡ್ ಮೂರನೇ ಅಡ್ಡ ರಸ್ತೆಯ ರಾಜಕಾಲುವೆ ಉಕ್ಕಿ ಹರಿದ ಪರಿಣಾಮ ಸ್ಥಳೀಯ ಮನೆಗಳು ಪ್ರವಾಹದಿಂದ ಮುಳುಗಡೆಯಾಗಿದ್ದವು. ಬುಧವಾರ ಸಂಜೆ ರಾಜಕಾಲುವೆಯ ಕಿರು ಸೇತುವೆಯ ಅಡಿಭಾಗ ಕುಸಿದಿದ್ದು ಸೇತುವೆ ಕುಸಿದು ಬೀಳಲು ಕ್ಷಣಗಣನೆ ಆರಂಭವಾಗಿದೆ. ಸುರಕ್ಷತೆ ದೃಷ್ಟಿಯಿಂದ ಸೇತುವೆ ಸಂಚಾರವನ್ನ ಸೋಮೇಶ್ವರ ಪುರಸಭಾ ಅಧಿಕಾರಿಗಳು ನಿಷೇಧಗೊಳಿಸಿದ್ದು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನ ಸುಮಾರು ಎಪ್ಪತ್ತು ಮನೆಗಳ ಸಂಪರ್ಕ ಕಡಿತವಾಗಿ ನಿವಾಸಿಗಳು ಮನೆ ತಲುಪಲು ಬವಣೆ ಪಡುವಂತಾಗಿದೆ.
ಅಂಬಿಕಾರೋಡ್ ಮೂರನೇ ಅಡ್ಡ ರಸ್ತೆಯ ರಾಜ ಕಾಲುವೆಯ ಕಿರು ಸೇತುವೆ ಹಳೆಯದಾಗಿದ್ದು ಕಳೆದ ನಾಲ್ಕು ವರ್ಷದ ಹಿಂದಷ್ಟೆ ಸೋಮೇಶ್ವರ ಪುರಸಭೆ ಆಡಳಿತವು ಸೇತುವೆಯ ದುರಸ್ತಿ ಕಾರ್ಯ ನಡೆಸಿತ್ತು. ಸೇತುವೆಯ ಕಳಪೆ ದುರಸ್ತಿಯಿಂದಾಗಿ ಕಳೆದ ಗುರುವಾರ ಸುರಿದ ಭಾರೀ ಮಳೆಗೆ ಕಾಲುವೆಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಅಡಿಭಾಗವು ಕುಸಿತಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು ಕೆಲವರು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ರಾಜಕಾಲುವೆಯ ಕಿರು ಸೇತುವೆಯ ಮೇಲೆ ದಿನ ನಿತ್ಯಲೂ ಕಲ್ಲು , ಮರಳು ಇತರ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಘನ ವಾಹನಗಳು ಚಲಿಸುತ್ತಿದ್ದ ಪರಿಣಾಮ ಹಳೆ ಸೇತುವೆ ಶಿಥಿಲಗೊಂಡು ಕುಸಿದಿರೋದಾಗಿ ಆರೋಪಿಸಿದ್ದಾರೆ.





ಮತ್ತೆ ಧಾರಾಕಾರವಾಗಿ ಮಳೆ ಸುರಿದರೆ ಸೇತುವೆ ಸಂಪೂರ್ಣ ಕುಸಿದು ಬಿದ್ದು ರಾಜ ಕಾಲುವೆಯಲ್ಲಿ ಹರಿಯುವ ಭಾರೀ ಪ್ರಮಾಣದ ನೀರು ಸ್ಥಳೀಯ ಅನೇಕ ಮನೆಗಳಿಗೆ ನುಗ್ಗಿ ಮತ್ತೆ ಅವಾಂತರ ಸೃಷ್ಟಿಸುವ ಭೀತಿ ಎದುರಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಮತ್ತು ಪ್ರಬಂಧಕರಾದ ಕೃಷ್ಣ, ಸ್ಥಳೀಯ ಪುರಸಭೆ ಸದಸ್ಯರಾದ ಪರ್ವೀನ್ ಅವರು ಭೇಟಿ ನೀಡಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ. ಸದ್ಯಕ್ಕೆ ಕುಸಿದಿರುವ ಸೇತುವೆ ಬೀಳದಂತೆ ತಡೆಯುವುದೇ ಅಧಿಕಾರಿಗಳಿಗೆ ಸವಾಲಾಗಿದೆ.
ಅತ್ತ ಕುಂಪಲ ಮುಖ್ಯ ರಸ್ತೆಯಲ್ಲಿ ಪೈಪ್ ಲೈನ್ ಕಾಮಗಾರಿಯಿಂದ ಕೆಟ್ಟು ಹೋಗಿದ್ದು, ದುರಸ್ತಿ ಕಾಮಗಾರಿಗೆಂದು ಅಲ್ಲಿನ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ. ಕುಂಪಲ ಪ್ರದೇಶಕ್ಕೆ ತೆರಳುವವರೂ ಕೂಡ ಅಂಬಿಕಾ ರೋಡಿನ ಮೂರನೇ ಅಡ್ಡ ರಸ್ತೆಯನ್ನೇ ಪರ್ಯಾಯವಾಗಿ ನೆಚ್ಚಿಕೊಂಡಿದ್ದರು.
Mangalore Cracks in Someshwara Ambika Road Culvert Raise Flood Fears; Bridge Closed, 70 Homes Cut Off.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm