ಬ್ರೇಕಿಂಗ್ ನ್ಯೂಸ್
04-06-25 10:43 pm Mangalore Correspondent ಕರಾವಳಿ
ಉಳ್ಳಾಲ, ಜೂ.4 : ಮೊನ್ನೆಯಷ್ಟೇ ಉಳ್ಳಾಲ ತಾಲೂಕಿನಾದ್ಯಂತ ಗರಿಷ್ಠ ಪ್ರಮಾಣದಲ್ಲಿ ಸುರಿದಿದ್ದ ಮಳೆಯಿಂದಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಅಂಬಿಕಾ ರೋಡ್ ಮೂರನೇ ಅಡ್ಡ ರಸ್ತೆಯ ರಾಜಕಾಲುವೆ ಉಕ್ಕಿ ಹರಿದ ಪರಿಣಾಮ ಸ್ಥಳೀಯ ಮನೆಗಳು ಪ್ರವಾಹದಿಂದ ಮುಳುಗಡೆಯಾಗಿದ್ದವು. ಬುಧವಾರ ಸಂಜೆ ರಾಜಕಾಲುವೆಯ ಕಿರು ಸೇತುವೆಯ ಅಡಿಭಾಗ ಕುಸಿದಿದ್ದು ಸೇತುವೆ ಕುಸಿದು ಬೀಳಲು ಕ್ಷಣಗಣನೆ ಆರಂಭವಾಗಿದೆ. ಸುರಕ್ಷತೆ ದೃಷ್ಟಿಯಿಂದ ಸೇತುವೆ ಸಂಚಾರವನ್ನ ಸೋಮೇಶ್ವರ ಪುರಸಭಾ ಅಧಿಕಾರಿಗಳು ನಿಷೇಧಗೊಳಿಸಿದ್ದು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನ ಸುಮಾರು ಎಪ್ಪತ್ತು ಮನೆಗಳ ಸಂಪರ್ಕ ಕಡಿತವಾಗಿ ನಿವಾಸಿಗಳು ಮನೆ ತಲುಪಲು ಬವಣೆ ಪಡುವಂತಾಗಿದೆ.
ಅಂಬಿಕಾರೋಡ್ ಮೂರನೇ ಅಡ್ಡ ರಸ್ತೆಯ ರಾಜ ಕಾಲುವೆಯ ಕಿರು ಸೇತುವೆ ಹಳೆಯದಾಗಿದ್ದು ಕಳೆದ ನಾಲ್ಕು ವರ್ಷದ ಹಿಂದಷ್ಟೆ ಸೋಮೇಶ್ವರ ಪುರಸಭೆ ಆಡಳಿತವು ಸೇತುವೆಯ ದುರಸ್ತಿ ಕಾರ್ಯ ನಡೆಸಿತ್ತು. ಸೇತುವೆಯ ಕಳಪೆ ದುರಸ್ತಿಯಿಂದಾಗಿ ಕಳೆದ ಗುರುವಾರ ಸುರಿದ ಭಾರೀ ಮಳೆಗೆ ಕಾಲುವೆಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಅಡಿಭಾಗವು ಕುಸಿತಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು ಕೆಲವರು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ರಾಜಕಾಲುವೆಯ ಕಿರು ಸೇತುವೆಯ ಮೇಲೆ ದಿನ ನಿತ್ಯಲೂ ಕಲ್ಲು , ಮರಳು ಇತರ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಘನ ವಾಹನಗಳು ಚಲಿಸುತ್ತಿದ್ದ ಪರಿಣಾಮ ಹಳೆ ಸೇತುವೆ ಶಿಥಿಲಗೊಂಡು ಕುಸಿದಿರೋದಾಗಿ ಆರೋಪಿಸಿದ್ದಾರೆ.





ಮತ್ತೆ ಧಾರಾಕಾರವಾಗಿ ಮಳೆ ಸುರಿದರೆ ಸೇತುವೆ ಸಂಪೂರ್ಣ ಕುಸಿದು ಬಿದ್ದು ರಾಜ ಕಾಲುವೆಯಲ್ಲಿ ಹರಿಯುವ ಭಾರೀ ಪ್ರಮಾಣದ ನೀರು ಸ್ಥಳೀಯ ಅನೇಕ ಮನೆಗಳಿಗೆ ನುಗ್ಗಿ ಮತ್ತೆ ಅವಾಂತರ ಸೃಷ್ಟಿಸುವ ಭೀತಿ ಎದುರಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಮತ್ತು ಪ್ರಬಂಧಕರಾದ ಕೃಷ್ಣ, ಸ್ಥಳೀಯ ಪುರಸಭೆ ಸದಸ್ಯರಾದ ಪರ್ವೀನ್ ಅವರು ಭೇಟಿ ನೀಡಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ. ಸದ್ಯಕ್ಕೆ ಕುಸಿದಿರುವ ಸೇತುವೆ ಬೀಳದಂತೆ ತಡೆಯುವುದೇ ಅಧಿಕಾರಿಗಳಿಗೆ ಸವಾಲಾಗಿದೆ.
ಅತ್ತ ಕುಂಪಲ ಮುಖ್ಯ ರಸ್ತೆಯಲ್ಲಿ ಪೈಪ್ ಲೈನ್ ಕಾಮಗಾರಿಯಿಂದ ಕೆಟ್ಟು ಹೋಗಿದ್ದು, ದುರಸ್ತಿ ಕಾಮಗಾರಿಗೆಂದು ಅಲ್ಲಿನ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ. ಕುಂಪಲ ಪ್ರದೇಶಕ್ಕೆ ತೆರಳುವವರೂ ಕೂಡ ಅಂಬಿಕಾ ರೋಡಿನ ಮೂರನೇ ಅಡ್ಡ ರಸ್ತೆಯನ್ನೇ ಪರ್ಯಾಯವಾಗಿ ನೆಚ್ಚಿಕೊಂಡಿದ್ದರು.
Mangalore Cracks in Someshwara Ambika Road Culvert Raise Flood Fears; Bridge Closed, 70 Homes Cut Off.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm